ಎಂಬಿಎಗಿಂತ ನೌಕರಿಗೆ ಎಂಜಿನಿಯರಿಂಗ್ ಬೆಸ್ಟ್: ಸಮೀಕ್ಷೆ
Recommended Video

ನವದೆಹಲಿ, ನವೆಂಬರ್ 21: ದೇಶದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಬಿಟ್ಟು ಮೂಲ ವಿಜ್ಞಾನದ ಕಡೆ ಹೆಚ್ಚು ಒತ್ತು ನೀಡುತ್ತಿದ್ದಾರೆ, ಹಾಗೆಯೇ ಎಂಜಿನಿಯರಿಂಗ್ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ ಈಗ ಸಮೀಕ್ಷೆಯೊಂದು ಹೇಳುತ್ತಿದೆ ಜಾಬ್ ಮಾಡಲು ಎಂಬಿಎಗಿಂತ ಎಂಜಿನಿಯರಿಂಗ್ ಸೂಕ್ತ.
'ರಾಷ್ಟ್ರೀಯ ಕೌಶಲ ಸಮೀಕ್ಷೆ 2019'ರಲ್ಲಿ ಈ ವಿಷಯ ಬಹಿರಂಗಗೊಂಡಿದೆ.ಈ ವರ್ಷ ದೇಶದಲ್ಲಿ ಪದವೀಧರರಿಗೆ ಹೆಚ್ಚು ಉದ್ಯೋಗಾರ್ಹತೆಯನ್ನು ಸೃಷ್ಟಿಸಿದ ರಾಜ್ಯಗಳಲ್ಲಿ ಆಂಧ್ರಪ್ರದೇಶ ಮೊದಲ ಸ್ಥಾನದಲ್ಲಿದ್ದು, ಪಶ್ಚಿಮ ಬಂಗಾಳ, ದೆಹಲಿ ನಂತರದ ಸ್ಥಾನದಲ್ಲಿದೆ.
ಹೆಚ್ಚಿನ ಉದ್ಯೋಗಾರ್ಹತೆ ಪಡೆದವರಲ್ಲಿ ಎಂಜಿನಿಯರ್ಗಳೇ ಮುಂಚೂಣಿಯಲ್ಲಿದ್ದಾರೆ. ಉದ್ಯೋಗಾರ್ಹತೆ ವಿಷಯದಲ್ಲಿ ಎಂಬಿಎಗಿಂತಲೂ ಎಂಜಿನಿಯರಿಂಗ್ ಪದವೀಧರರೇ ಮುಂದಿದ್ದಾರೆ.

ಉದ್ಯೋಗಾರ್ಹತೆ ಶೇ.46ಕ್ಕೆ ಏರಿಕೆಯಾಗಿದೆ
ಸಮೀಕ್ಷೆ ಪ್ರಕಾರ ವಿದ್ಯಾರ್ಥಿನಿಯರ ಉದ್ಯೋಗಾರ್ಹತೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.38ರಿಂದ 46ಕ್ಕೆ ಏರಿಕೆಯಾಗಿದೆ.

ಹೊಸಬರು 2 ಲಕ್ಷ ವೇತನ ಅಪೇಕ್ಷೆ
ಪದವಿಯನ್ನು ಆಗಸ್ಟೇ ಮುಗಿಸಿದ ಹೊಸಬರಲ್ಲಿ ಶೇ.70ರಷ್ಟು ಮಂದಿ ವಾರ್ಷಿಕ 2 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ವೇತನ ಪ್ಯಾಕೇಜ್ ಅಪೇಕ್ಷೆ ಮಾಡುತ್ತಿದ್ದಾರೆ.

ನೇಮಕ ಬಗ್ಗೆ ಸಕಾರಾತ್ಮಕ ಅಭಿಪ್ರಾಯ
ನೇಮಕದ ಬಗ್ಗೆ ಶೇ.64ರಷ್ಟು ಮಂದಿ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.15ರಷ್ಟು ಏರಿಕೆಯಾಗುವ ವಿಶ್ವಾಸವಿದೆ.

ಬೇಡಿಕೆ ಕಳೆದುಕೊಳ್ತಿದೆ ಎಂಜಿನಿಯರಿಂಗ್: ಮೂಲ ವಿಜ್ಞಾನಕ್ಕೆ ಡಿಮ್ಯಾಂಡ್
ರಾಜ್ಯದಲ್ಲಿ ಎಂಜಿನಿಯರಿಂಗ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಮೂಲ ವಿಜ್ಞಾನದತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಎಂಜಿನಿಯರಿಂಗ್ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಮೂಲ ವಿಜ್ಞಾನ ಅಂದರೆ ಬಿಎಸ್ಸಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಆರೇಳು ವರ್ಷಗಳ ಹಿಂದೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಂಡರೆ ಸಾಕು ನಂತರ ಎಂಜಿನಿಯರಿಂಗ್ ಗೆ ಸೇರುವುದು ಪಕ್ಕಾ ಆಗಿತ್ತು. ಆದರೆ ವಿದ್ಯಾರ್ಥಿಗಳ ಆಯ್ಕೆ ಬೇರೆಯಾಗಿದೆ. ಅಪ್ಲೈಡ್ ಸೈನ್ಸ್ನ್ನು ಎಂಜಿನಿಯರಿಂಗ್ ತಾಂತ್ರಿಕ ಕೋರ್ಸ್ಗಳಾದ ಏರೋಸ್ಪೇಸ್ ಎಂಜಿನಿಯರಿಂಗ್, ಆಟೋಮಡಿವ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಗಳಲ್ಲಿ ಕಲಿಸಲಾಗುತ್ತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications