ಎಂಬಿಎಗಿಂತ ನೌಕರಿಗೆ ಎಂಜಿನಿಯರಿಂಗ್ ಬೆಸ್ಟ್: ಸಮೀಕ್ಷೆ
Recommended Video

ನವದೆಹಲಿ, ನವೆಂಬರ್ 21: ದೇಶದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಬಿಟ್ಟು ಮೂಲ ವಿಜ್ಞಾನದ ಕಡೆ ಹೆಚ್ಚು ಒತ್ತು ನೀಡುತ್ತಿದ್ದಾರೆ, ಹಾಗೆಯೇ ಎಂಜಿನಿಯರಿಂಗ್ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ ಈಗ ಸಮೀಕ್ಷೆಯೊಂದು ಹೇಳುತ್ತಿದೆ ಜಾಬ್ ಮಾಡಲು ಎಂಬಿಎಗಿಂತ ಎಂಜಿನಿಯರಿಂಗ್ ಸೂಕ್ತ.
'ರಾಷ್ಟ್ರೀಯ ಕೌಶಲ ಸಮೀಕ್ಷೆ 2019'ರಲ್ಲಿ ಈ ವಿಷಯ ಬಹಿರಂಗಗೊಂಡಿದೆ.ಈ ವರ್ಷ ದೇಶದಲ್ಲಿ ಪದವೀಧರರಿಗೆ ಹೆಚ್ಚು ಉದ್ಯೋಗಾರ್ಹತೆಯನ್ನು ಸೃಷ್ಟಿಸಿದ ರಾಜ್ಯಗಳಲ್ಲಿ ಆಂಧ್ರಪ್ರದೇಶ ಮೊದಲ ಸ್ಥಾನದಲ್ಲಿದ್ದು, ಪಶ್ಚಿಮ ಬಂಗಾಳ, ದೆಹಲಿ ನಂತರದ ಸ್ಥಾನದಲ್ಲಿದೆ.
ಹೆಚ್ಚಿನ ಉದ್ಯೋಗಾರ್ಹತೆ ಪಡೆದವರಲ್ಲಿ ಎಂಜಿನಿಯರ್ಗಳೇ ಮುಂಚೂಣಿಯಲ್ಲಿದ್ದಾರೆ. ಉದ್ಯೋಗಾರ್ಹತೆ ವಿಷಯದಲ್ಲಿ ಎಂಬಿಎಗಿಂತಲೂ ಎಂಜಿನಿಯರಿಂಗ್ ಪದವೀಧರರೇ ಮುಂದಿದ್ದಾರೆ.

ಉದ್ಯೋಗಾರ್ಹತೆ ಶೇ.46ಕ್ಕೆ ಏರಿಕೆಯಾಗಿದೆ
ಸಮೀಕ್ಷೆ ಪ್ರಕಾರ ವಿದ್ಯಾರ್ಥಿನಿಯರ ಉದ್ಯೋಗಾರ್ಹತೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.38ರಿಂದ 46ಕ್ಕೆ ಏರಿಕೆಯಾಗಿದೆ.

ಹೊಸಬರು 2 ಲಕ್ಷ ವೇತನ ಅಪೇಕ್ಷೆ
ಪದವಿಯನ್ನು ಆಗಸ್ಟೇ ಮುಗಿಸಿದ ಹೊಸಬರಲ್ಲಿ ಶೇ.70ರಷ್ಟು ಮಂದಿ ವಾರ್ಷಿಕ 2 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ವೇತನ ಪ್ಯಾಕೇಜ್ ಅಪೇಕ್ಷೆ ಮಾಡುತ್ತಿದ್ದಾರೆ.

ನೇಮಕ ಬಗ್ಗೆ ಸಕಾರಾತ್ಮಕ ಅಭಿಪ್ರಾಯ
ನೇಮಕದ ಬಗ್ಗೆ ಶೇ.64ರಷ್ಟು ಮಂದಿ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.15ರಷ್ಟು ಏರಿಕೆಯಾಗುವ ವಿಶ್ವಾಸವಿದೆ.

ಬೇಡಿಕೆ ಕಳೆದುಕೊಳ್ತಿದೆ ಎಂಜಿನಿಯರಿಂಗ್: ಮೂಲ ವಿಜ್ಞಾನಕ್ಕೆ ಡಿಮ್ಯಾಂಡ್
ರಾಜ್ಯದಲ್ಲಿ ಎಂಜಿನಿಯರಿಂಗ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಮೂಲ ವಿಜ್ಞಾನದತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಎಂಜಿನಿಯರಿಂಗ್ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಮೂಲ ವಿಜ್ಞಾನ ಅಂದರೆ ಬಿಎಸ್ಸಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ ಆರೇಳು ವರ್ಷಗಳ ಹಿಂದೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಂಡರೆ ಸಾಕು ನಂತರ ಎಂಜಿನಿಯರಿಂಗ್ ಗೆ ಸೇರುವುದು ಪಕ್ಕಾ ಆಗಿತ್ತು. ಆದರೆ ವಿದ್ಯಾರ್ಥಿಗಳ ಆಯ್ಕೆ ಬೇರೆಯಾಗಿದೆ. ಅಪ್ಲೈಡ್ ಸೈನ್ಸ್ನ್ನು ಎಂಜಿನಿಯರಿಂಗ್ ತಾಂತ್ರಿಕ ಕೋರ್ಸ್ಗಳಾದ ಏರೋಸ್ಪೇಸ್ ಎಂಜಿನಿಯರಿಂಗ್, ಆಟೋಮಡಿವ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಗಳಲ್ಲಿ ಕಲಿಸಲಾಗುತ್ತಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications