ಸುಪ್ರೀಂ ತೀರ್ಪಿನ ನಂತರ ಯಾವ್ಯಾವುದಕ್ಕೆ ಆಧಾರ್ ಕಡ್ಡಾಯ? ಯಾವುದಕ್ಕೆ ಕಡ್ಡಾಯವಲ್ಲ?
Recommended Video

ನವದೆಹಲಿ, ಸೆಪ್ಟೆಂಬರ್ 26: ಬಹುದಿನದಿಂದ ಕುತೂಹಲದಿಂದ ಕಾಯುತ್ತಿದ್ದ ಆಧಾರ್ ಮಾನ್ಯತೆಯ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಇಂದು ಹೊರಬಿದ್ದಿದೆ. ಆಧಾರ್ ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಇತ್ತೀಚೆಗಷ್ಟೇ ಖಾಸಗೀತನ ಮೂಲಭೂತ ಹಕ್ಕು ಎಂಬ ಮಹತ್ವದ ತೀರ್ಪು ನೀಡಿದ್ದ ಕೋರ್ಟ್, ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದರೂ, ಎಲ್ಲಾ ಸೇವೆಗಳಿಗೂ ಅದು ಕಡ್ಡಾಯವಲ್ಲ ಎನ್ನುವ ಮೂಲಕ ಖಾಸಗೀತನಕ್ಕೆ ಧಕ್ಕೆಯಾಗುತ್ತಿದೆ ಎಂಬ ಕೂಗಿಗೆ ಸ್ಪಂದಿಸಿದೆ.
ಆದರೆ ಆಧಾರ್ ಅನ್ನು ವಿವಿಧ ಸೇವೆಗಳೊಂದಿಗೆ ಜೋಡಿಸುವುದರಿಂದ ಯಾವುದೇ ರೀತಿಯಲ್ಲಿ ಖಾಸಗೀ ಮಾಹಿತಿ ಸೋರಿಕೆಯಾಗುವುದಿಲ್ಲ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ದತ್ತಾಂಶ(ಡೆಟಾ) ರಕ್ಷಿಸುವುದಕ್ಕೆ ಕೇಂದ್ರ ಸರ್ಕಾರ ಸೂಕ್ತ, ಸುರಕ್ಷಿತ ಕಾನೂನು ಜಾರಿಗೆ ತರಬೇಕು ಎಂದೂ ಕೋರ್ಟು ಹೇಳಿದೆ.
ಅಷ್ಟಕ್ಕೂ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಆಧಾರ್ ಕಾರ್ಡ್ ಯಾವೆಲ್ಲ ಸೇವೆಗಳಿಗೆ ಕಡ್ಡಾಯ ಮತ್ತು ಯಾವುದಕ್ಕೆ ಕಡ್ಡಾಯವಲ್ಲ. ಇಲ್ಲಿದೆ ನೋಡಿ...

ಆಧಾರ್ ಕಾರ್ಡ್ ಯಾವ್ಯಾವುದಕ್ಕೆ ಕಡ್ಡಾಯ?
* ಸರ್ಕಾರದ ಎಲ್ಲಾ ಯೋಜನೆಗಳಿಗೂ ಆಧಾರ್ ಕಡ್ಡಾಯ
* ಪ್ಯಾನ್ ಕಾರ್ಡ್ ಜೊತೆ ಆಧಾರ್ ಜೋಡಣೆಯೂ ಕಡ್ಡಾಯ
* ಆದಾಯ ತೆರಿಗೆ ರಿಟರ್ನ್ಸ್ ಪಾವತಿಗೆ ಆಧಾರ್ ಕಡ್ಡಾಯ

ಯಾವುದಕ್ಕೆ ಕಡ್ಡಾಯವಲ್ಲ?
* ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯವಲ್ಲ.
* ಶಾಲಾ, ಕಾಲೇಜು, ಇತರ ಶಿಕ್ಷಣ ಸಂಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ.
* ಖಾಸಗೀ ಕಂಪನಿಗಳಿಗೆ ಆಧಾರ್ ಕಡ್ಡಾಯವಲ್ಲ.

ಸಿಮ್ ಕೊಳ್ಳಲು ಕಡ್ಡಾಯವಲ್ಲ!
* ಮೊಬೈಲ್ ಸಿಮ್ ಕೊಳ್ಳುವುದಕ್ಕೆ ಆಧಾರ್ ಕಡ್ಡಾಯವಲ್ಲ.
* ಮೊಬೈಲ್ ನಂಬರ್ ಜೊತೆ ಆಧಾರ್ ಜೋಡಣೆ ಕಡ್ಡಾಯವಲ್ಲ.
* ಯುಜಿಸಿ, ನೀಟ್ ಮತ್ತು ಸಿಬಿಎಸ್ ಇ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ

ಐವರು ನ್ಯಾಯಮೂರ್ತಿಗಳ ಪೀಠ
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ಪಂಚಸದಸ್ಯ ಪೀಠ ಈ ಐತಿಹಾಸಿಕ ತೀರ್ಪು ನೀಡಿದ್ದು, ಮಿಶ್ರಾ ಅವರೊಂದಿಗೆ ಈ ಪೀಠದಲ್ಲಿ ನ್ಯಾ ಎಕೆ ಸಿಕ್ರಿ, ನ್ಯಾ.ಎ ಎಂ ಖಾನ್ ವಿಲ್ಕರ್, ನ್ಯಾ.ಡಿ ವೈ ಚಂದ್ರಚೂಡ್, ನ್ಯಾ. ಅಶೋಕ್ ಭೂಷಣ್ ಇದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications