ಜ.5 ರವರೆಗೆ ದೆಹಲಿ, ಹರಿಯಾಣದಲ್ಲಿ ಶೀತ ಗಾಳಿ, ಮಳೆಯ ಮುನ್ಸೂಚನೆ
ನವದೆಹಲಿ ಡಿಸೆಂಬರ್ 2: 2022 ರ ಆರಂಭದಲ್ಲಿ ದೆಹಲಿ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಇಳಿಯುವುದರೊಂದಿಗೆ ಭಾರತದ ಉತ್ತರದ ರಾಜ್ಯಗಳಾದ್ಯಂತ ಚಳಿಗಾಲದ ಚಳಿ ಪ್ರಾರಂಭವಾಗಿದೆ. ಇತ್ತೀಚಿನ ಮುನ್ಸೂಚನೆಗಳ ಪ್ರಕಾರ, ಈ ಶೀತ ಪರಿಸ್ಥಿತಿಗಳು ಮುಂದಿನ ಕೆಲವು ದಿನಗಳವರೆಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಜನವರಿ 5 ರವರೆಗೆ ಉತ್ತರದ ಹಲವು ರಾಜ್ಯಗಳಲ್ಲಿ ಶೀತ ಅಲೆ ಇರಲಿದೆ ಎಂದು ಭವಿಷ್ಯ ನುಡಿದಿದೆ. ಪಶ್ಚಿಮದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಮುಂದಿನ ವಾರ ಅಥವಾ ಎರಡು ದಿನ ಲಘು ಮಳೆ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
IANS ವರದಿಗಳ ಪ್ರಕಾರ, ಪಶ್ಚಿಮದಲ್ಲಿ ಚಂಡಮಾರುತದ ಚಲನೆಯಿಂದಾಗಿ ಜನವರಿ 3 ರಿಂದ ವಾಯುವ್ಯ ಭಾರತದ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದರಿಂದಾಗಿ ಕೆಲ ಪ್ರದೇಶದಲ್ಲಿ ಜನವರಿ 3 ರಿಂದ 7ರ ಅವಧಿಯಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆಯಿದೆ.

IMD ಮುನ್ಸೂಚನೆಯ ಪ್ರಕಾರ ಜನವರಿ 4 ಮತ್ತು 5 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತು ಜನವರಿ 5 ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಜನವರಿ 4 ಮತ್ತು 5 ರಂದು ಜಮ್ಮು ಮತ್ತು ಕಾಶ್ಮೀರ ಮತ್ತು ಜನವರಿ 5ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಸಾಧಾರಣ ಮಳೆಯಾಗುವ ಸಾಧ್ಯತೆ
ಇನ್ನೂ ಜನವರಿ 5 ರಿಂದ 7 ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ಮತ್ತು ದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದ ಮೇಲೆ ಸಾಕಷ್ಟು ವ್ಯಾಪಕವಾದ ಲಘು/ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು ಪಶ್ಚಿಮ ಮಧ್ಯಪ್ರದೇಶದಲ್ಲಿ ಲಘುವಾಗಿ ಪ್ರತ್ಯೇಕವಾದ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಹವಾಮಾನ ಮುನ್ಸೂಚನೆ ನೀಡಿದೆ. ಜನವರಿ 5 ರಂದು ಆಲಿಕಲ್ಲು ಮಳೆ ಜೊತೆಗೆ ಶೀತ ಗಾಳಿ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ಇರಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಈ ಪ್ರದೇಶಗಳಲ್ಲಿ ಶೀತ ಅಲೆಯು ಮುಂದಿನ ವಾರದವರೆಗೆ ಮುಂದುವರಿಯುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಭಾನುವಾರ (ಜನವರಿ 2, 2022) ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆಯ ಚಟುವಟಿಕೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಈ ಮಧ್ಯೆ ವಾಯುವ್ಯ ಭಾರತವು ಶೀತ ಅಲೆಗಳ ಸ್ಥಿತಿಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. "ನೈಋತ್ಯ ಬಂಗಾಳ ಕೊಲ್ಲಿಯಲ್ಲಿ, ದಕ್ಷಿಣ ಶ್ರೀಲಂಕಾದ ಕರಾವಳಿಯಲ್ಲಿ ಚಂಡಮಾರುತದ ಚಲನೆಯಿಂದ ತಮಿಳುನಾಡು, ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ "ಐಎಂಡಿ ಹೇಳಿದೆ.
Recommended Video
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications