ಪದ್ಮವಿಭೂಷಣ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ, ಏಪ್ರಿಲ್ 30: ನಿವೃತ್ತ ಅಟರ್ನಿ ಜನರಲ್ ಸೋಲಿ ಸೊರಾಬ್ಜಿ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 91ವಯಸ್ಸಾಗಿತ್ತು.
ಪದ್ಮವಿಭೂಷಣ ಪುರಸ್ಕೃತರಾಗಿದ್ದ ಹಿರಿಯ ವಕೀಲರಾಗಿದ್ದ ಸೋಲಿ ಸೊರಾಬ್ಜಿ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್ 19 ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
19030ರಲ್ಲಿ ಮುಂಬೈನಲ್ಲಿ ಜನಿಸಿದ ಸೋಲಿ ಜಹಾಂಗೀರ್ ಸೊರಾಬ್ಜಿ ಅವರು 1953ರಲ್ಲಿ ಬಾಂಬೆ ಹೈಕೋರ್ಟ್ ವಕೀಲರಾಗಿ ವೃತ್ತಿ ಆರಂಭಿಸಿದರು. 1971ರಲ್ಲಿ ಸುಪ್ರೀಂಕೋರ್ಟ್ ಹಿರಿಯ ಕೌನ್ಸೆಲ್ ಆಗಿದ್ದರು. 1988 ರಿಂದ 2004ರ ಅವಧಿಯಲ್ಲಿ ಅಟರ್ನಿ ಜನರಲ್ ಆಗಿದ್ದರು.

ಮಾನವ ಹಕ್ಕುಗಳ ಹೋರಾಟ ಪರ ವಕೀಲರಾಗಿದ್ದ ಸೊರಾಬ್ಜಿ 1997ರಲ್ಲಿ ವಿಶ್ವಸಂಸ್ಥೆಯಿಂದ ನೈಜೀರಿಯಾದ ವಿಶೇಷ ಪ್ರತಿನಿಧಿಯಾಗಿದ್ದರು.
ವಿಶ್ವಸಂಸ್ಥೆಯ ಅಲ್ಪಸಂಖ್ಯಾತ ಆಯೋಗ, ಮಾನವ ಹಕ್ಕುಗಳ ಉಪ ಸಮಿತಿ ಚೇರ್ಮನ್ ಆಗಿದ್ದರು. ವಿಶ್ವಸಂಸ್ಥೆಯ ವಿಶ್ವ ನ್ಯಾಯಾಲಯದ ಸದಸ್ಯರಾಗಿದ್ದರು.
2002ರಲ್ಲಿ ಭಾರತೀಯ ಸಂವಿಧಾನದ ತಿದ್ದುಪಡಿ ಆಯೋಗದ ಸದಸ್ಯರಾಗಿದ್ದರು. ಜಾಝ್ ಸಂಗೀತಪ್ರಿಯರಾಗಿದ್ದ ಸೋಲಿ ಲೇಖಕರಾಗಿ ಕೂಡಾ ಗಮನ ಸೆಳೆದಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಲಿ ಸೊರಾಬ್ಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟ್ವೀಟ್ನಲ್ಲಿ ಮೋದಿ ಅವರು: ''ಶ್ರೀ ಸೋಲಿ ಸೊರಾಬ್ಜಿ ಅವರು ಅತ್ಯುತ್ತಮ ವಕೀಲ ಮತ್ತು ಬುದ್ಧಿಜೀವಿಯಾಗಿದ್ದರು. ಕಾನೂನಿನ ಮೂಲಕ ಅವರು ಬಡವರು ಮತ್ತು ವಂಚಿತರಿಗೆ ನೆರವಾಗಲು ಮುಂದಾಗುತ್ತಿದ್ದರು. ಅವರು ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದು ಸದಾ ಸ್ಮರಣೆಯಲ್ಲಿರುತ್ತದೆ ಎಂಬುದು ಉಲ್ಲೇಖನಾರ್ಹ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ.'' ಎಂದು ತಿಳಿಸಿದ್ದಾರೆ.
Shri Soli Sorabjee was an outstanding lawyer and intellectual. Through law, he was at the forefront of helping the poor and downtrodden. He will be remembered for his noteworthy tenures India’s Attorney General. Saddened by his demise. Condolences to his family and admirers.
— Narendra Modi (@narendramodi) April 30, 2021
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications