ಅಪನಗದೀಕರಣದ ಬಗ್ಗೆ ಮಾಜಿ ಚುನಾವಣಾಧಿಕಾರಿಗಳ ಸ್ಪೋಟಕ ಹೇಳಿಕೆ!
ನವದೆಹಲಿ, ಡಿಸೆಂಬರ್ 03: "ಅಪನಗದೀಕರಣದಿಂದ ಚುನಾವಣೆಗಳಲ್ಲಿ ಕಪ್ಪುಹಣದ ಬಳಕೆ ಕಡಿಮೆಯಾಗಿರಬಹುದು ಎಂಬ ನಿರೀಕ್ಷೆ ಸುಳ್ಳು. ನೋಟು ನಿಷೇಧದ ನಂತರೂ ಕಪ್ಪು ಹಣದ ಬಳಕೆ ಮತ್ತಷ್ಟು ಜಾಸ್ತಿಯೇ ಆಗಿದೆ" ಎಂಬ ಸ್ಫೋಟಕ ಸತ್ಯವನ್ನು ಮಾಜಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಹೊರಹಾಕಿದ್ದಾರೆ.
ಇತ್ತೀಚೆಗಷ್ಟೇ ನಿವೃತ್ತರಾದ ಒ ಪಿ ರಾವತ್ ಅವರು, ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡುತ್ತಿದ್ದರು.
"ಅಪನಗದೀಕರಣದ ನಂತರ ಚುನಾವಣೆಯಲ್ಲಿ ಕಪ್ಪು ಹಣಗಳನ್ನು ಬಳಸುವುದು ಕಡಿಮೆಯಾಗಬಹುದು ಎಂದು ನಾವೂ ನಿರೀಕ್ಷಿಸಿದ್ದೆವು. ಆದರೆ ನಮ್ಮ ಊಹೆ ಸುಳ್ಳಾಯಿತು. ಅಪನಗದೀಕರಣದ ನಂತರೂ ಯಾವೊಬ್ಬ ರಾಜಕಾರಣಿಯೂ ಕಪ್ಪು ಹಣದ ಕೊರತೆಯಿಂದ ಬಳಲಿದ್ದನ್ನು ನೋಡಿಲ್ಲ. ಅಪನಗದೀಕರಣಕ್ಕೂ ಮೊದಲ ಮತ್ತು ನಂತರದ ಚುನಾವಣೆಗಳಿಗೆ ಹೋಲಿಸಿದರೆ, ನಂತರವೇ ಹೆಚ್ಚು ಕಪ್ಪು ಹಣ ಬಳಕೆಯಾದಂತಿದೆ" ಎಂಬ ಆಘಾತಕಾರಿ ಅಂಶವನ್ನು ರಾವತ್ ಹೊರಹಾಕಿದ್ದಾರೆ.

ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ, ಮತ್ತು ಖರ್ಚು ವೆಚ್ಚಗಳಲ್ಲಿ ಕಡಿತವಾಗಬೇಕು ಎಂಬುದು ದೀರ್ಘಾವಧಿ ಯೋಜನೆ. ಅದಕ್ಕೆ ಸಮಯ ಬೇಕು. ಕಳೆದ ಆಗಸ್ಟ್ ನಲ್ಲಿ ಚುನಾವಣಾ ಆಯೋಗದದ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಚುನಾವಣೆಯ ವೆಚ್ಚವನ್ನು ಕಡಿತಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೆ ಎಲ್ಲಾ ಪಕ್ಷಗಳೂ ಒಪ್ಪಿಗೆ ಸೂಚಿಸಿವೆ. ಭವಿಷ್ಯದಲ್ಲಿ ಇದು ಸಹಕಾರಿಯಾಗಬಹುದು ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.
ಕಳೆದ ವಾರವಷ್ಟೇ ತಮ್ಮ ಸ್ಥಾನದಿಂದ ನಿವೃತ್ತರಾದ ಒಪಿ ರಾವತ್ ಅವರ ನಂತರ ಸುನೀಲ್ ಅರೋರಾ ಅವರನ್ನು ನೂತನ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications