ಅಪನಗದೀಕರಣದ ಬಗ್ಗೆ ಮಾಜಿ ಚುನಾವಣಾಧಿಕಾರಿಗಳ ಸ್ಪೋಟಕ ಹೇಳಿಕೆ!
ನವದೆಹಲಿ, ಡಿಸೆಂಬರ್ 03: "ಅಪನಗದೀಕರಣದಿಂದ ಚುನಾವಣೆಗಳಲ್ಲಿ ಕಪ್ಪುಹಣದ ಬಳಕೆ ಕಡಿಮೆಯಾಗಿರಬಹುದು ಎಂಬ ನಿರೀಕ್ಷೆ ಸುಳ್ಳು. ನೋಟು ನಿಷೇಧದ ನಂತರೂ ಕಪ್ಪು ಹಣದ ಬಳಕೆ ಮತ್ತಷ್ಟು ಜಾಸ್ತಿಯೇ ಆಗಿದೆ" ಎಂಬ ಸ್ಫೋಟಕ ಸತ್ಯವನ್ನು ಮಾಜಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಹೊರಹಾಕಿದ್ದಾರೆ.
ಇತ್ತೀಚೆಗಷ್ಟೇ ನಿವೃತ್ತರಾದ ಒ ಪಿ ರಾವತ್ ಅವರು, ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡುತ್ತಿದ್ದರು.
"ಅಪನಗದೀಕರಣದ ನಂತರ ಚುನಾವಣೆಯಲ್ಲಿ ಕಪ್ಪು ಹಣಗಳನ್ನು ಬಳಸುವುದು ಕಡಿಮೆಯಾಗಬಹುದು ಎಂದು ನಾವೂ ನಿರೀಕ್ಷಿಸಿದ್ದೆವು. ಆದರೆ ನಮ್ಮ ಊಹೆ ಸುಳ್ಳಾಯಿತು. ಅಪನಗದೀಕರಣದ ನಂತರೂ ಯಾವೊಬ್ಬ ರಾಜಕಾರಣಿಯೂ ಕಪ್ಪು ಹಣದ ಕೊರತೆಯಿಂದ ಬಳಲಿದ್ದನ್ನು ನೋಡಿಲ್ಲ. ಅಪನಗದೀಕರಣಕ್ಕೂ ಮೊದಲ ಮತ್ತು ನಂತರದ ಚುನಾವಣೆಗಳಿಗೆ ಹೋಲಿಸಿದರೆ, ನಂತರವೇ ಹೆಚ್ಚು ಕಪ್ಪು ಹಣ ಬಳಕೆಯಾದಂತಿದೆ" ಎಂಬ ಆಘಾತಕಾರಿ ಅಂಶವನ್ನು ರಾವತ್ ಹೊರಹಾಕಿದ್ದಾರೆ.

ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ, ಮತ್ತು ಖರ್ಚು ವೆಚ್ಚಗಳಲ್ಲಿ ಕಡಿತವಾಗಬೇಕು ಎಂಬುದು ದೀರ್ಘಾವಧಿ ಯೋಜನೆ. ಅದಕ್ಕೆ ಸಮಯ ಬೇಕು. ಕಳೆದ ಆಗಸ್ಟ್ ನಲ್ಲಿ ಚುನಾವಣಾ ಆಯೋಗದದ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಚುನಾವಣೆಯ ವೆಚ್ಚವನ್ನು ಕಡಿತಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕೆ ಎಲ್ಲಾ ಪಕ್ಷಗಳೂ ಒಪ್ಪಿಗೆ ಸೂಚಿಸಿವೆ. ಭವಿಷ್ಯದಲ್ಲಿ ಇದು ಸಹಕಾರಿಯಾಗಬಹುದು ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.
ಕಳೆದ ವಾರವಷ್ಟೇ ತಮ್ಮ ಸ್ಥಾನದಿಂದ ನಿವೃತ್ತರಾದ ಒಪಿ ರಾವತ್ ಅವರ ನಂತರ ಸುನೀಲ್ ಅರೋರಾ ಅವರನ್ನು ನೂತನ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications