ವಿವಾದಿತ ಮಾಜಿ ಮುಖ್ಯಮಂತ್ರಿ ಎನ್ ಡಿ ತಿವಾರಿ ಮಗ ರೋಹಿತ್ ಸಾವು
ನವದೆಹಲಿ, ಏಪ್ರಿಲ್ 16: ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಮಾಜಿ ಮುಖ್ಯಮಂತ್ರಿ ಎನ್ಡಿ ತಿವಾರಿ ಅವರ ಮಗ ರೋಹಿತ್ ಶೇಖರ್ ತಿವಾರಿ ಮಂಗಳವಾರ ಮೃತಪಟ್ಟಿದ್ದಾರೆ.
ಅವರನ್ನು ದೆಹಲಿಯ ಮ್ಯಾಕ್ಸ್ ಸಾಕೇತ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು.
ದಕ್ಷಿಣ ದೆಹಲಿ ಡಿಸಿಪಿ ವಿಜಯ್ ಕುಮಾರ್ ಅವರು ರೋಹಿತ್ ಶೇಖರ್ ಅವರ ಸಾವನ್ನು ಖಚಿತಪಡಿಸಿದ್ದಾರೆ. 'ಉತ್ತರ ಪ್ರದೇಶ ಮತ್ತು ಉತ್ತರಾಖಂಡಗಳ ಮಾಜಿ ಮುಖ್ಯಮಂತ್ರಿ ಎನ್ಡಿ ತಿವಾರಿ ಅವರ ಮಗ ರೋಹಿತ್ ಶೇಖರ್ ತಿವಾರಿ ಅವರ ಮೃತದೇಹವನ್ನು ಮ್ಯಾಕ್ಸ್ ಸಾಕೇತ್ ಆಸ್ಪತ್ರೆಗೆ ತರಲಾಗಿದೆ. ಹೆಚ್ಚಿನ ವಿವರಗಳಿಗೆ ಕಾಯುತ್ತಿದ್ದೇವೆ' ಎಂದು ಅವರು ಹೇಳಿಕೆ ನೀಡಿದ್ದಾರೆ.

ದೆಹಲಿಯ ರಕ್ಷಣಾ ಕಾಲೋನಿಯಲ್ಲಿ ರೋಹಿತ್ ಶೇಖರ್ ನೆಲೆಸಿದ್ದರು. ಅವರ ಹಠಾತ್ ಸಾವಿಗೆ ಕಾರಣ ತಿಳಿದುಬಂದಿಲ್ಲ.
ರೋಹಿತ್ ಅವರ ಮೂಗುಗಳಲ್ಲಿ ರಕ್ತ ಸುರಿಯತೊಡಗಿತ್ತು ಕೂಡಲೇ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಅವರ ತಾಯಿ ವೈದ್ಯಕೀಯ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು.
ಎನ್ಡಿ ತಿವಾರಿ ಅವರ ವಿರುದ್ಧ ರೋಹಿತ್ ಶೇಖರ್ ತಿವಾರಿ ಸುದೀರ್ಘ ಕಾಲ ಕಾನೂನು ಹೋರಾಟ ನಡೆಸಿದ್ದರು. ರೋಹಿತ್ ಅವರು ತಾವು ಎನ್ ಡಿ ತಿವಾರಿ ಅವರ ಮಗ ಎಂದು ಪ್ರತಿಪಾದಿಸಿದ್ದರು. ಆದರೆ, ಇದನ್ನು ಎನ್ ಡಿ ತಿವಾರಿ ನಿರಾಕರಿಸಿದ್ದರು.
ರೋಹಿತ್ ತಮ್ಮ ಮಗ ಎಂಬುದನ್ನು ಒಪ್ಪದ ಎನ್ ಡಿ ತಿವಾರಿ ಕಾನೂನು ಸಮರ ಎದುರಿಸಿದ್ದರು. ಅನೇಕ ದೂರು, ವಿಚಾರಣೆಗಳು ಮತ್ತು ಡಿಎನ್ಎ ಪರೀಕ್ಷೆಯ ಬಳಿಕ ಅವರು ಕೊನೆಗೂ ರೋಹಿತ್ ತಮ್ಮ ಪುತ್ರ ಎಂಬುದನ್ನು ಒಪ್ಪಿಕೊಂಡಿದ್ದರು.
2007ರಲ್ಲಿ ರೋಹಿತ್ ದಾವೆ ದಾಖಲಿಸಿದ್ದರು. ಡಿಎನ್ಎ ವರದಿಯಲ್ಲಿ ರೋಹಿತ್ ಅವರು ತಿವಾರಿ ಅವರಿಂದಲೇ ಜನಿಸಿದ ಮಗ ಎನ್ನುವುದು ದೃಢಪಟ್ಟಿತ್ತು.
ಕಾಂಗ್ರೆಸ್ ಮುಖಂಡರಾಗಿದ್ದ ಎನ್ ಡಿ ತಿವಾರಿ ಅವರು 2018ರ ಅಕ್ಟೋಬರ್ 18ರಂದು ಮೃತಪಟ್ಟಿದ್ದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications