ಮನಮೋಹನ್ ಸಿಂಗ್ ಆರೋಗ್ಯ ಏರುಪೇರು; ಏಮ್ಸ್ಗೆ ದಾಖಲು
ನವದೆಹಲಿ, ಅಕ್ಟೋಬರ್ 13; ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. 89 ವರ್ಷದ ಮನಮೋಹನ್ ಸಿಂಗ್ರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬುಧವಾರ ಸಂಜೆ ಡಾ. ಮನಮೋಹನ್ ಸಿಂಗ್ರನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ ಮತ್ತು ನಿಶಕ್ತಿಯಿಂದ ಅವರು ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸೋಮವಾರವೂ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಬಳಿಕ ಚೇತರಿಸಿಕೊಂಡರು ಸುಸ್ತು ಕಾಣಿಸಿಕೊಂಡಿದೆ.

ಜ್ವರ ಕಾಣಿಸಿಕೊಂಡ ಬಳಿಕ ಮನಮೋಹನ್ ಸಿಂಗ್ ಅತಿಯಾಗಿ ಆಯಾಸಗೊಂಡಿದ್ದರು. ದ್ರವ ರೂಪದ ಆಹಾರವನ್ನು ಮಾತ್ರ ತೆಗೆದುಕೊಳ್ಳುತ್ತಿದ್ದರು ಎಂಬ ಮಾಹಿತಿ ಇದೆ. ಈ ವರ್ಷದ ಏಪ್ರಿಲ್ನಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.
ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ ಈ ಕುರಿತು ಮಾತನಾಡಿದ್ದಾರೆ, "ಅವರ ಆರೋಗ್ಯ ಸ್ಥಿರವಾಗಿದೆ. ಸಾಮಾನ್ಯ ಚಿಕಿತ್ಸೆಗಾಗಿ ಅವರು ದಾಖಲಾಗಿದ್ದಾರೆ. ಹೆಚ್ಚಿನ ಮಾಹಿತಿ ಇದ್ದರೆ ಹಂಚಿಕೊಳ್ಳುತ್ತೇವೆ" ಎಂದು ಹೇಳಿದ್ದಾರೆ.
"ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಕೆಲವು ವದಂತಿಗಳು ಕೇಳಿ ಬರುತ್ತಿವೆ. ಅವರ ಆರೋಗ್ಯ ಸ್ಥಿರವಾಗಿವೆ. ಯಾವುದಾದರೂ ಮಾಹಿತಿ ಇದ್ದರೆ ನಾವು ಹಂಚಿಕೊಳ್ಳುತ್ತೇವೆ. ಮಾಧ್ಯಮದ ಸ್ನೇಹಿತರ ಕಾಳಜಿಗೆ ಧನ್ಯವಾದಗಳು" ಎಂದು ಪ್ರಕಟಣೆಯಲ್ಲಿ ಪ್ರಣವ್ ಝಾ ತಿಳಿಸಿದ್ದಾರೆ.
ಏಮ್ಸ್ನ ಹೃದ್ರೋಗ ವಿಭಾಗಕ್ಕೆ ಡಾ. ಮನಮೋಹನ್ ಸಿಂಗ್ ದಾಖಲಾಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿತ್ತು. 2009ರಲ್ಲಿ ಅವರಿಗೆ ಬೈಪಾಸ್ ಸರ್ಜರಿ ನಡೆದಿತ್ತು. ಕಳೆದ ವರ್ಷದ ಮೇ ತಿಂಗಳಿನಲ್ಲಿಯೂ ಎದೆ ನೋವಿನ ಕಾರಣ ಅವರು ಏಮ್ಸ್ಗೆ ದಾಖಲಾಗಿದ್ದರು.
ಕೋವಿಡ್ ಸೋಂಕು ತಗುಲಿದ್ದರಿಂದ ಈ ವರ್ಷದ ಏಪ್ರಿಲ್ 19ರಂದು ಡಾ. ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡು ಏಪ್ರಿಲ್ 29ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
-
Vastu Alert: ಹಳೆಯ ಬಾವಿ ಮೇಲೆ ಮನೆ ಕಟ್ಟಿದ್ರೆ ಏನಾಗುತ್ತದೆ? ಇಲ್ಲಿದೆ ವಾಸ್ತು ಸತ್ಯಗಳು -
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications