ತೆಹೆಲ್ಕಾ ಪ್ರಕರಣದಲ್ಲಿ ರಾಜಕಾರಣಿ ಜಯಾ ಜೇಟ್ಲಿ ದೋಷಿ
ನವದೆಹಲಿ, ಜುಲೈ 26: ರಕ್ಷಣಾ ಇಲಾಖೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮತಾ ಪಕ್ಷದ ಅಧ್ಯಕ್ಷೆ ಜಯಾ ಜೇಟ್ಲಿ ಹಾಗೂ ಇಬ್ಬರನ್ನು ದೋಷಿಗಳು ಎಂದು ಸಿಬಿಐ ನ್ಯಾಯಾಲಯ ಘೋಷಿಸಿದೆ.
ಹಿರಿಯ ರಾಜಕಾರಣಿ ಜಯಾ ಜೇಟ್ಲಿ, ಸಮತಾ ಪಕ್ಷದ ಮಾಜಿ ಸದಸ್ಯ ಗೋಪಾಲ್ ಪಚೇರ್ವಾಲ್, ಮೇಜರ್ ಜನರಲ್ (ನಿವೃತ್ತ) ಎಸ್. ಪಿ ಮುರುಗೈ ಅವರನ್ನು ಈ ಪ್ರಕರಣದಲ್ಲಿ ತಪಿತಸ್ಥರು ಎಂದು ಸಿಬಿಐ ವಿಶೇಷ ನ್ಯಾಯಾಲಯದ ಜಡ್ಜ್ ವೀರೇಂದ್ರ ಭಟ್ ಘೋಷಿಸಿ, ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದರು.
2001ರಲ್ಲಿ ಅನಾಮಧೇಯ ಕಂಪನಿಯೊಂದಕ್ಕೆ ನೆರವಲು ರಕ್ಷಣಾ ಇಲಾಖೆ ಮೂಲಕ ಇವರೆಲ್ಲರೂ ಒಪ್ಪಂದ ಮಾಡಿಕೊಂಡಿದ್ದರು ಎಂದು ಆರೋಪಿಸಿ ತೆಹಲ್ಕಾ ಸುದ್ದಿ ಸಂಸ್ಥೆಯು ಆಪರೇಷನ್ ವೆಸ್ಟ್ ಎಂಡ್ ಹೆಸರಿನಲ್ಲಿ ಸುದ್ದಿ ಪ್ರಸಾರ ಮಾಡಿತ್ತು.

ತೆಹೆಲ್ಕಾ ಆಪರೇಷನ್ ವೆಸ್ಟ್ ಎಂಡ್ ನಂತರ ಸಮತಾ ಪಾರ್ಟಿಯ ಮುಖಂಡ ಅಂದಿನ ರಕ್ಷಣಾ ಸಚಿವ ಸ್ಥಾನದಿಂದ ಜಾರ್ಜ್ ಫರ್ನಾಂಡೀಸ್ ಅವರು ಬಲವಂತವಾಗಿ ಕೆಳಗಿಳಿಯಬೇಕಾಗಿತ್ತು. ವೆಸ್ಟ್ ಎಂಡ್ ಇಂಟರ್ ನ್ಯಾಷನಲ್ ಎಂಬ ಕಂಪನಿಯಿಂದ ಜಯಾ ಜೇಟ್ಲಿ 2 ಲಕ್ಷ ರು ಹಾಗೂ ಮುರುಗೈ 20 ಸಾವಿರ ರು ಪಡೆದುಕೊಂಡಿದ್ದರು ಎಂದು ಸಂಸ್ಥೆಯ ಪ್ರತಿನಿಧಿ ಮ್ಯಾಥ್ಯೂ ಸ್ಯಾಮುಯಲ್ ಹೇಳಿಕೆ ನೀಡಿದ್ದಾರೆ.
ತೆಹೆಲ್ಕಾ ಸ್ಟಿಂಗ್ ಆಪರೇಷನ್ ವೆಸ್ಟ್ ಎಂಡ್ ಬಗ್ಗೆ ತಮ್ಮ ಜೀವನ ಚರಿತ್ರೆ ಪುಸ್ತಕದಲ್ಲಿ ವಿಸ್ತಾರವಾಗಿ ಸಮತಾ ಪಾರ್ಟಿಯ ಅಧ್ಯಕ್ಷೆ ಜಯಾ ಜೇಟ್ಲಿ ಬರೆದುಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಗೆ ತೆಹಲ್ಕಾ ರಕ್ಷಣೆಗೆ ಮುಂದಾಗಿದ್ದರು. ಈ ಬಗ್ಗೆ ಅಂದಿನ ವಿತ್ತ ಸಚಿವ ಪಿ ಚಿದಂಬರಂಗೆ ಏನೆಲ್ಲ ನಿರ್ದೇಶನ ನೀಡಿದ್ದರು ಎಂಬುದನ್ನು ಜಯಾ ಅವರು ವಿವರಿಸಿದ್ದಾರೆ. ತೆಹೆಲ್ಕಾ ಹೂಡಿಕೆದಾರರನ್ನು ಚೆನ್ನಾಗಿ ನೋಡಿಕೊಳ್ಳಿ ಯಾವುದೇ ರೀತಿ ಅನ್ಯಾಯವಾಗಬಾರದು ಎಂದು ಅಂದಿನ ವಿತ್ತ ಸಚಿವ ಪಿ ಚಿದಂಬರಂಗೆ ಸೋನಿಯಾ ಗಾಂಧಿ ಅವರು ಪತ್ರ ಬರೆದಿದ್ದರು ಎಂದು ಜಯಾ ಜೇಟ್ಲಿ ಆರೋಪಿಸಿದ್ದರು. ಆದರೆ, ಇದು ಯಾವುದು ಅವರ ರಕ್ಷಣೆಗೆ ಬರಲೇ ಇಲ್ಲ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications