ದೆಹಲಿ ಪೊಲೀಸರಿಂದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಬಂಧನ
ನವದೆಹಲಿ, ಮೇ 18: ವಲಸೆ ಕಾರ್ಮಿಕರು ಮನೆಗಳನ್ನು ತಲುಪಲು ಕೇಂದ್ರ ಸರ್ಕಾರ ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕೆಂದು ಧರಣಿ ಕುಳಿತಿದ್ದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಘಾಟ್ ಬಳಿ ಧರಣಿ ಕುಳಿತುಕೊಂಡಿದ್ದಾಗ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಸಿನ್ಹಾ ಅವರ ಜೊತೆ ಎಎಪಿ ಮುಖಂಡರಾದ ಸಂಜಯ್ ಸಿಂಗ್ ಮತ್ತು ದಿಲೀಪ್ ಪಾಂಡೆ ಅವರನ್ನೂ ಬಂಧಿಸಲಾಗಿದೆ.
ಲಾಕ್ಡೌನ್ನಲ್ಲಿ ಸಿಕ್ಕಿಬಿದ್ದರುವ ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಹಿಂದಿರುಗಿಸಲು ಸರಿಯಾದ ವ್ಯವಸ್ಥೆ ಮಾಡಬೇಕೆಂದು ಸಿನ್ಹಾ ಧರಣಿ ನಡೆಸುತ್ತಿದ್ದರು. "ನಮ್ಮನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ" ಎಂದು ಸಿನ್ಹಾ ಸೋಮವಾರ ಸಂಜೆ ಟ್ವೀಟ್ ಮಾಡಿದ್ದಾರೆ.

"ಸಶಸ್ತ್ರ ಪಡೆಗಳು ಮತ್ತು ಅರೆಸೈನಿಕ ಪಡೆಗಳಿಗೆ, ಅವರ ಆಜ್ಞೆಯ ಮೇರೆಗೆ ಎಲ್ಲಾ ಸಂಪನ್ಮೂಲಗಳೊಂದಿಗೆ ವಲಸೆ ಕಾರ್ಮಿಕರನ್ನು ಗೌರವಯುತವಾಗಿ ಅವರವ ಮನೆಗಳಿಗೆ ಕಳುಹಿಸಬೇಕು" ಎಂಬುದು ಸಿನ್ಹಾ ಅವರ ಬೇಡಿಕೆಯಾಗಿದೆ. ಬಿಜೆಪಿಯವರು ಕೇವಲ ಶ್ರೀಮಂತರ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಜಿ ಬಿಜೆಪಿ ಮುಖಂಡ ಸಿನ್ಹಾ ಮೋದಿ ಸರ್ಕಾರವನ್ನು ಇತ್ತೀಚೆಗೆ ಹೆಚ್ಚು ಟೀಕಿಸುತ್ತಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications