ಎಎಪಿ ನಾಟಕ ಮುಂದುವರಿಕೆ: ಕೇಜ್ರಿವಾಲ್ ರಾಜೀನಾಮೆ
ನವದೆಹಲಿ, ಮಾ.4: ಆಮ್ ಆದ್ಮಿ ಪಕ್ಷದ ನಾಟಕ ಮುಂದುವರೆದಿದೆ. ರಾಷ್ಟ್ರೀಯ ಕಾರ್ಯಕಾರಿ ಸಭೆ ಆರಂಭಕ್ಕೂ ಕೆಲವೇ ಗಂಟೆಗಳಿಗೂ ಮುನ್ನ ಪಕ್ಷದ ರಾಷ್ಟ್ರೀಯ ಸಂಚಾಲಕ ಸ್ಥಾನಕ್ಕೆ ಎಎಪಿ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ಸಲ್ಲಿಸಿರುವ ಸುದ್ದಿ ಬಂದಿದೆ.
ದೆಹಲಿಯ ಅಭಿವೃದ್ದಿ ನನ್ನ ಮೊದಲ ಆದ್ಯತೆ, ನಾನು ಈ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಲಿದ್ದೇನೆ ಎಂದಿರುವ ಕೇಜ್ರಿವಾಲ್, ಅವರು ರಾಷ್ಟ್ರೀಯ ಕಾರ್ಯಕಾರಿ ಸಭೆಗೂ ಗೈರು ಹಾಜರಾಗಿದ್ದಾರೆ. ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ನಾಯಕರ ನಡಾವಳಿಯಿಂದ ಎಎಪಿ ಕಾರ್ಯಕರ್ತರು ಕಕ್ಕಾಬಿಕ್ಕಿಯಾಗಿದ್ದಾರೆ.

ಆಮ್ ಆದ್ಮಿ ಪಕ್ಷದ 21 ಪ್ರಮುಖ ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಕಾರ್ಯಕಾರಿ ಸಭೆ ಬುಧವಾರ ಮಧ್ಯಾಹ್ನ ನಿಗದಿಯಾಗಿದೆ. ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ನಡುವಿನ ಜಟಾಪಟಿಗೆ ಈ ಸಭೆ ಅಂತಿಮ ಹಾಡುವ ನಿರೀಕ್ಷೆಯಿದೆ.[ಎಎಪಿ ಆಂತರಿಕ ಕಲಹದ ವರದಿ]
ಈ ಹಿಂದೆ ಕೂಡಾ ಅರವಿಂದ್ ಕೇಜ್ರಿವಾಲ್ ಅವರು ರಾಜೀನಾಮೆ ಸಲ್ಲಿಸಿದ್ದರು ಎಂಬ ಸತ್ಯವನ್ನು ಯೋಗೇಂದ್ರ ಯಾದವ್ ಇತ್ತೀಚೆಗೆ ಬಹಿರಂಗಗೊಳಿಸಿದ್ದರು. ಆದರೆ ಅರವಿಂದ್ ಅವರ ರಾಜಿನಾಮೆಯನ್ನು ರಾಷ್ಟ್ರೀಯ ಕಾರ್ಯಕಾರಣಿ ತಿರಸ್ಕರಿಸಿತ್ತು ಎಂದು ಆಪ್ ಮುಖಂಡ ಆಶುತೋಷ್ ಅವರು ಹೇಳಿದ್ದರು.
ಎನ್ನಾರೈಗಳ ಕರೆ: ಆಮ್ ಆದ್ಮಿ ಪಾರ್ಟಿ (ಎಎಪಿ)ಯ ಆಂತರಿಕ ಕಲಹ, ಭಿನ್ನಮತಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ವಿದೇಶಗಳಲ್ಲಿರುವ ಆಪ್ ಬೆಂಬಲಿಗರು, ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಿಕೊಂಡು ಪಕ್ಷದಲ್ಲಿ ಐಕ್ಯತೆ ಕಾಯ್ದುಕೊಳ್ಳುವಂತೆ ನಾಯಕತ್ವಕ್ಕೆ ಸಲಹೆ ನೀಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications