ಬಜೆಟ್: ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಸಾಧ್ಯತೆ
ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಅವರು ಇಂದು ಮಂಡಿಸಿದ ಬಜೆಟ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಮೇಲಿನ ಅಬಕಾರಿ ಸುಂಕ ತಗ್ಗಿಸಿರುವ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ಗೆ 2 ರೂಪಾಯಿ ಕಡಿಮೆ ಆಗುವ ಸಾಧ್ಯತೆ ಇದೆ.

ಬಜೆಟ್ನಲ್ಲಿ ಬ್ರಾಂಡೆಡ್ ಮತ್ತು ಬ್ರಾಂಡ್ ರಹಿತ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕವನ್ನು ಕಡಿಮೆಗೊಳಿಸಿದೆ. ಕಳೆದ ವರ್ಷದ ಅಕ್ಟೋಬರ್ ನಲ್ಲಿ ಅಬಕಾರಿ ಸುಂಕವನ್ನು ಕಡಿಮೆ ಮಾಡಲಾಗಿತ್ತು.
ಪ್ರಸ್ತುತ ಕಚ್ಚಾ ತೈಲದ ಅಂತರರಾಷ್ಟ್ರೀಯ ಬೆಲೆ, ಬ್ಯಾರೆಲ್ ಒಂದಕ್ಕೆ 67 ಡಾಲರ್ ಇದ್ದು ಇನ್ನೆರಡು ವಾರಗಳಲ್ಲಿ ಇದು 70 ಡಾಲರ್ ಆಗಲಿದೆ. ಕಚ್ಚಾ ತೈಲ ತಜ್ಞರ ಪ್ರಕಾರ ತೈಲ ಬೆಲೆಯು ಇನ್ನೂ ಹಲವು ತಿಂಗಳುಗಳ ಕಾಲ ಏರುಗತಿಯಲ್ಲೇ ಇರಲಿದ್ದು, ಬ್ಯಾರೆಲ್ ಒಂದಕ್ಕೆ 100 ಡಾಲರ್ ದಾಟಲಿದೆ.
ಕಳೆದ ಒಂದು ವರ್ಷದಿಂದ ಇಳಿಕೆ ಕಂಡಿದ್ದ ಕಚ್ಚಾ ತೈಲ ಬೆಲೆ ಈಗ ಏರಿಕೆ ಕಾಣುತ್ತಿದೆ. ಕಚ್ಚಾ ತೈಲ ಬೆಲೆ ಇಳಿಕೆಯಲ್ಲಿದ್ದಾಗ ಸರ್ಕಾರವು ಅಬಕಾರಿ ಸುಂಕವನ್ನು ಪೆಟ್ರೋಲ್ ಮೇಲೆ ಲೀಟರ್ಗೆ 12 ರೂಪಾಯಿ ಮತ್ತು ಡೀಸೆಲ್ ಮೇಲೆ 13.77 ಹೆಚ್ಚಿಸಿತ್ತು. ಹಣಕಾಸು ಇಳಿಜಾರು ತಪ್ಪಿಸಲೆಂದು ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಸಹಿತ ಅಬಕಾರಿ ಸುಂಕ ಹೆಚ್ಚಿಸುವ ಮೂಲಕ ಸಮತೋಲನ ಕಾಯ್ದುಕೊಳ್ಳುವಂತೆ ಮಾಡಲಾಗಿತ್ತು.
ಇದೀಗ ಕಚ್ಚಾ ತೈಲ ಬೆಲೆ ಹೆಚ್ಚಿದ್ದು ಅಬಕಾರಿ ಸುಂಕವನ್ನು ಸರ್ಕಾರ ಕಡಿಮೆ ಗೊಳಿಸಿ ಮಧ್ಯಮ ವರ್ಗದ ಮೇಲೆ ಬೀಳುತ್ತಿರುವ ಹೊರೆ ತಪ್ಪಿಸಲು ಹೆಣಗಾಡುತ್ತಿದೆ.
ಇಂಧನವನ್ನು ಜಿಎಸ್ಟಿ ಅಧೀನಕ್ಕೆ ತರುವಂತೆ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಬಹು ಕಾಲದಿಂದ ಒತ್ತಾಯ ಮಾಡುತ್ತಿದ್ದು, ಜಿಎಸ್ಟಿ ಕೌನ್ಸಿಲ್ ಈ ಬಗ್ಗೆ ಮುಂದಿನ ತನ್ನ ಸಭೆಗಳಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ಗಳು ಜಿಎಸ್ಟಿ ಅಧೀನಕ್ಕೆ ಬಂದರೆ ಅವುಗಳ ಈಗಿನ ಬೆಲೆಗಿಂತ ಶೇ40 ಪ್ರತಿಶತ ಕಡಿಮೆ ಬೆಲೆಗೆ ದೊರಕುತ್ತವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications