ಅಪ್ರಾಪ್ತ ಬಾಲಕಿ ಮೇಲೆ ಶಾಲೆಯಲ್ಲೇ ಸಾಮೂಹಿಕ ಅತ್ಯಾಚಾರ:ಎಫ್ಐಆರ್
ನವದೆಹಲಿ, ಅಕ್ಟೋಬರ್ 07: ರಾಷ್ಟ್ರ ರಾಜಧಾನಿಯ ಶಾಲೆ ಒಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ವಾಶ್ರೂಂ ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ. ಆದರೆ ಈವರೆಗೆ ಯಾರನ್ನು ಬಂಧಿಸಲಾಗಿಲ್ಲ ಎಂದು ದೆಹಲಿಯ ಪೊಲೀಸರು ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ದೆಹಲಿಯಲ್ಲಿ ಶಾಲೆಯ ವಾಶ್ ರೂಂನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಹಿರಿಯ ತರಗತಿಯ ಇಬ್ಬರು ಹುಡುಗರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಆ ಇಬ್ಬರ ಮೇಲೆ ಕಳೆದ ಮಂಗಳವಾರ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆ ಬಲೆ ಬೀಸಿದ್ದಾರೆ.

ಇತ್ತೀಚೆಗಷ್ಟೇ ಸಂತ್ರಸ್ತ ಬಾಲಕಿ ಪೊಲೀಸರನ್ನು ಸಂಪರ್ಕಿಸಿದ ಬಳಿಕವೇ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಕೃತ್ಯ ನಡೆದಿರುವ ಬಗ್ಗೆ ದೃಢಪಡಿಸಿದ ದೆಹಲಿ ಡಿಸಿಪಿ ಅಮೃತಾ ಗುಗುಲೋತ್ ಅವರು, ಸಂತ್ರಸ್ತೆ ಮಾಹಿತಿ ಮೇರೆಗೆ ಕೂಡಲೇ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ಗಳನ್ವಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದರು.
ಈ ಅತ್ಯಾಚಾರ ಘಟನೆಯ ಕುರಿತು ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರು ಮತ್ತು ಶಾಲಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಆಯೋಗದ ಪ್ರಕಾರ, ಕಳೆದ ಜುಲೈನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಬಾಲಕಿ ಹಾಗೂ ಆಕೆಯ ಕುಟುಂಬ ಆರೋಪಿಸಿತ್ತು. ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.
ಶಾಲಾ ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಿದ್ದರು
ಬಾಲಕಿ ತನ್ನ ತರಗತಿಗೆ ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಹುಡುಗರನ್ನು ತಳ್ಳಿದ್ದಾಳೆ. ನಂತರ ಆಕೆಯೇ ಅವರ ಬಳಿ ಕ್ಷಮೆಯಾಚಿಸಿದ್ದಾಳೆ. ಆದರೆ ಆ ಹುಡುಗರು ಆಕೆಯನ್ನು ನಿಂದಿಸುತ್ತಾ ವಾಶ್ರೂಮ್ಗೆ ಎಳೆದೊಯ್ದಿದ್ದಾರೆ. ನಂತರ ಒಳಗಿನಿಂದ ಬಾಗಿಲು ಹಾಕಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ. ಆಕೆ ಈ ಬಗ್ಗೆ ಶಾಲೆಯ ಶಿಕ್ಷಕರಿಗೆ ತಿಳಿಸಿದರೂ ಅವರು ಹುಡುಗರಿಗೆ ಬೈದಿದ್ದಾರೆ. ಆದರೆ ಪ್ರಕರಣವನ್ನು ಮುಚ್ಚಿಟ್ಟಾರೆ ಎಂದು ಆಯೋಗ ತಿಳಿಸಿದೆ.

ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮಾತನಾಡಿ, ದೆಹಲಿಯ ಶಾಲೆ ಒಂದರಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿದೆ. ಶಾಲೆಯ ಶಿಕ್ಷಕರು ವಿಷಯ ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ರಾಜಧಾನಿಯಲ್ಲಿ ಶಾಲೆಗಳಲ್ಲಿ ಸಹ ಮಕ್ಕಳಿಗೆ ಸರುಕ್ಷಿತತೆ ಇಲ್ಲದಾಗಿರುವುದು ದುರದೃಷ್ಟಕರ. ಈ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕಿದೆ. ಅಲ್ಲದೆ ಈ ಘಟನೆಯಲ್ಲಿ ಶಾಲಾಧಿಕಾರಿಗಳ ಪಾತ್ರದ ಬಗ್ಗೆ ಸೂಕ್ತ ತನಿಖೆ ಆಗಬೇಕು. ಶಾಲೆಯ ಅಧಿಕಾರಿಗಳು ಘಟನೆ ಬಗ್ಗೆ ಗೊತ್ತಿದ್ದರೂ ಮುಚ್ಚಿಡಲು ಕಾರಣ ಏನು ಎಂಬ ಸತ್ಯ ಬಯಲಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್











Click it and Unblock the Notifications