ಗಂಗಾ ವಿಲಾಸ್: ಇರುವುದನ್ನೇ ಮತ್ತೆ ಉದ್ಘಾಟನೆ ಮಾಡುವುದು ಬಿಜೆಪಿ ಕೆಲಸ; ಅಖಿಲೇಶ್ ಯಾದವ್
ನವದೆಹಲಿ, ಜ. 15: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಗಂಗಾ ವಿಲಾಸ್ಗೆ ಚಾಲನೆ ನೀಡಿದ ಒಂದು ದಿನದ ನಂತರ, ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಭಾರತೀಯ ಜನತಾ ಪಕ್ಷವು ಎಲ್ಲಾ ಯೋಜನೆಗಳನ್ನು ಮರು ಉದ್ಘಾಟನೆ ಮಾಡುವ ಸಂಪ್ರದಾಯವನ್ನು ಹೊಂದಿದೆ. ಈ ಐಶಾರಾಮಿ ನದಿ ಹಡಗು ಕಳೆದ 17 ವರ್ಷಗಳಿಂದ ಸೇವೆಯಲ್ಲಿದೆ. ಜೊತೆಗೆ ಇದರಲ್ಲಿ ಈಗ ಮದ್ಯವನ್ನು ಪೂರೈಸುವ ಬಾರ್ಗಳನ್ನು ಹೊಂದಿದೆ. ಚುನಾವಣೆಯ ಉದ್ದೇಶಕ್ಕಾಗಿ ಬಿಜೆಪಿಯು ಪ್ರಚಾರದ ಸಮಯದಲ್ಲಿ ಅಸ್ತಿತ್ವದಲ್ಲಿರುವ ವಸ್ತುಗಳನ್ನು ಮರು ಉದ್ಘಾಟನೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಹಡಗಿನಲ್ಲಿರುವ ಬಾರ್ಗಳ ಬಗ್ಗೆ ಬಿಜೆಪಿಯವರೇ ಪ್ರಸ್ತುತಪಡಿಸಬೇಕು. ಏಕೆಂದರೆ ಅವರೇ ಅಲ್ಲಿ ನೋಡಿರುವುದು ನಾನಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ರಾಯ್ಬರೇಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, "ಈ ನದಿ ನೌಕಾಯಾನ ಹಲವು ವರ್ಷಗಳಿಂದ ನಡೆಯುತ್ತಿದೆ. ಇದು ಹೊಸದಲ್ಲ, ಕಳೆದ 17 ವರ್ಷಗಳಿಂದ ನಡೆಯುತ್ತಿದೆ ಎಂದು ಯಾರೋ ನನಗೆ ತಿಳಿಸಿದ್ದಾರೆ. ಬಿಜೆಪಿ ಇದಕ್ಕೆ ಸ್ವಲ್ಪ ಅಭಿವೃದ್ಧಿ ಮಾಡಿ, ನಾವು ಅದನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿ ಪ್ರಚಾರ ಮತ್ತು ಸುಳ್ಳು ಹೇಳುವುದರಲ್ಲಿ ಬಿಜೆಪಿ ತುಂಬಾ ಮುಂದಿದೆ. ಪವಿತ್ರ ಗಂಗಾ ನದಿಯಲ್ಲಿನ ಈ ವಿಹಾರ ನೌಕಾಯಾನವು ವಿಹಾರ ಮಾತ್ರವಲ್ಲದೆ ಮದ್ಯವನ್ನು ಪೂರೈಸುವ ಬಾರ್ಗಳನ್ನು ಸಹ ಹೊಂದಿದೆ ಎಂದು ನಾನು ಕೇಳಿದ್ದೇನೆ" ಎಂದು ಆರೋಪಿಸಿದ್ದಾರೆ.
"ಇತ್ತೀಚಿನವರೆಗೂ, ನಾವು ಗಂಗಾ ಮಾತೆಗೆ ಆರತಿ ಎಂಬುದನ್ನು ಕೇಳುತ್ತಿದ್ದೆವು. ಧಾರ್ಮಿಕ ಸ್ಥಳದಲ್ಲಿ ಕುಳಿತು ಭಕ್ತಿಯ ಭಜನೆಗಳನ್ನು ಕೇಳುತ್ತಿದ್ದೆವು, ನಾವು ಗಂಗಾನದಿಯಲ್ಲಿ ದೋಣಿ ವಿಹಾರಕ್ಕೆ ಹೋದಾಗಲೆಲ್ಲಾ ನಾವು ಏನು ಮಾಡಬಹುದು ಮತ್ತು ಏನು ಮಾಡಬಾರದು ಎಂಬುದನ್ನು ಜನರು ವಿವರಿಸುತ್ತಾರೆ. ನಾವು ಇನ್ನೂ ಹಡಗಿನ ಒಳಗೆ ಪ್ರವೇಶಿಸಿಲ್ಲ. ಕ್ರೂಸ್ನಲ್ಲಿ ಬಾರ್ ಇದೆಯೇ ಎಂದು ಈಗ ಬಿಜೆಪಿಯವರು ಮಾತ್ರ ಹೇಳಬಹುದು" ಎಂದಿದ್ದಾರೆ.

'ಧಾರ್ಮಿಕ ಸ್ಥಳಗಳನ್ನು ಪ್ರವಾಸಿ ಸ್ಥಳಗಳನ್ನಾಗಿ ಮಾಡಿ ಹಣ ಗಳಿಸುವ ಬಿಜೆಪಿ ನೀತಿ ಖಂಡನೀಯ. ಜಗತ್ತಿನಾದ್ಯಂತ ಜನರು ಕಾಶಿಯ ಆಧ್ಯಾತ್ಮಿಕ ವೈಭವವನ್ನು ಅನುಭವಿಸಲು ಬರುತ್ತಾರೆಯೇ ಹೊರತು ಐಷಾರಾಮಿಗಾಗಿ ಅಲ್ಲ' ಎಂದು ಕಿಡಿಕಾರಿದ್ದಾರೆ.
ಶುಕ್ರವಾರ ಪ್ರಧಾನಿ ಮೋದಿ ವಾರಣಾಸಿಯಲ್ಲಿ ಗಂಗಾ ವಿಲಾಸ್ಗೆ ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದ್ದಾರೆ.
ಗಂಗಾ ವಿಲಾಸ್ ನದಿ ಹಡಗು ಉತ್ತರ ಪ್ರದೇಶದ ವಾರಣಾಸಿಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿ, 51 ದಿನಗಳಲ್ಲಿ ಸುಮಾರು 3,200 ಕಿಮೀ ಪ್ರಯಾಣಿಸಿ ಬಾಂಗ್ಲಾದೇಶದ ಮೂಲಕ ಅಸ್ಸಾಂನ ದಿಬ್ರುಗಢವನ್ನು ತಲುಪುತ್ತದೆ.
ಈ ಐಶಾರಾಮಿ ಹಡಗು 36 ಪ್ರವಾಸಿಗರ ಸಾಮರ್ಥ್ಯದೊಂದಿಗೆ 18 ಸೂಟ್ಗಳನ್ನು ಹೊಂದಿದೆ. ಎಲ್ಲಾ ಐಷಾರಾಮಿ ಸೌಕರ್ಯಗಳನ್ನು ಹೊಂದಿದೆ. ಮೊದಲ ಪ್ರಯಾಣದಲ್ಲಿ ಸ್ವಿಟ್ಜರ್ಲೆಂಡ್ನಿಂದ 32 ಪ್ರವಾಸಿಗರು ಪ್ರಯಾಣ ಹೊರಟಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications