ಭೂಗತ ಪಾತಕಿ ಛೋಟಾ ರಾಜನ್ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು
ನವದೆಹಲಿ, ಜುಲೈ 29: ಜೈಲು ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಏಮ್ಸ್) ದಾಖಲಾಗಿದ್ದಾರೆ.
ತಿಹಾರ್ ಜೈಲಿನಲ್ಲಿರುವ 61 ವರ್ಷದ ರಾಜನ್ ಗೆ ಎರಡು ತಿಂಗಳ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ಏಪ್ರಿಲ್ 24 ರಂದು ಏಮ್ಸ್ ದಾಖಲಾಗಿದ್ದರು. ಚೇತರಿಸಿಕೊಂಡ ನಂತರ ಮತ್ತೆ ಜೈಲಿಗೆ ಕರೆತರಲಾಗಿತ್ತು. ಈಗ ಹೊಟ್ಟೆ ನೋವಿನಿಂದ ಮತ್ತೆ ಆಸ್ಪತ್ರೆದೆ ದಾಖಲಾಗಿದ್ದಾರೆ.
ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. "ರಾಜನ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ. ಇಂದು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಆದಾಗ್ಯೂ, ಭೂಗತ ಪಾತಕಿಯ ಡಿಸ್ಚಾರ್ಜ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಭೂಗತ ಪಾತಕಿ ಛೋಟಾ ರಾಜನ್ ಇಂಡೋನೇಷಿಯಾದ ಬಾಲಿಯಲ್ಲಿ 2015ರಲ್ಲಿ ಬಂಧಿಸಲಾಗಿತ್ತು. ಅದಾದ ಬಳಿಕ ಭಾರತಕ್ಕೆ ವಾಪಸ್ ಕರೆತಂದು ತಿಹಾರ್ ಜೈಲಿನಲ್ಲಿ ಇಡಲಾಗಿತ್ತು. 2011ರಲ್ಲಿ ನಡೆದಿದ್ದ ಪತ್ರಕರ್ತ ಜೆ.ಡೇ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2018ರಲ್ಲಿ ಛೋಟಾ ರಾಜನ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಇನ್ನು ಛೋಟಾ ರಾಜನ್ ಸಾಮಾನ್ಯ ಕ್ರಿಮಿನಲ್ ಅಲ್ಲ. ಅವನ ಕೇಸ್ಗಳನ್ನು ಉಳಿದವರ ಕೇಸ್ಗಳಂತೆ ಪರಿಗಣಿಸಬಾರದು ಆತನಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸಿಬಿಐ (CBI) ಬಾಂಬೆ ಹೈಕೋರ್ಟ್ಗೆ ಬುಧವಾರ ಅರ್ಜಿ ಸಲ್ಲಿಸಿದೆ. ಛೋಟಾ ರಾಜನ್ ವಿರುದ್ಧ ವಿಚಾರಣೆ ಮಾಡಬೇಕಾದ ಹಲವು ಪ್ರಕರಣಗಳು ಬಾಕಿ ಇವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications