ಭಾರತಕ್ಕೆ ಬಂದ ಭೂಗತ ಪಾತಕಿ ಛೋಟಾ ರಾಜನ್
ನವದೆಹಲಿ, ನವೆಂಬರ್ 06 : ಇಂಡೋನೇಷಿಯಾದ ಬಾಲಿ ದ್ವೀಪದಲ್ಲಿ ಬಂಧಿತನಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಬಿಗಿಭದ್ರತೆಯ ನಡುವೆ ನವದೆಹಲಿಗೆ ಕರೆತರಲಾಗಿದೆ. ಸದ್ಯ, ಸಿಬಿಐ ಕೇಂದ್ರ ಕಚೇರಿಯಲ್ಲಿ ಛೋಟಾ ರಾಜನ್ ಇದ್ದು, ಮಧ್ಯಾಹ್ನದ ವೇಳೆಗೆ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ.
ಮುಂಬೈ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ತಂಡ ಛೋಟಾ ರಾಜನ್ನನ್ನು ವಿಶೇಷ ವಿಮಾನದಲ್ಲಿ ಬಾಲಿ ದ್ವೀಪದಿಂದ ನವದೆಹಲಿಗೆ ಕರೆದುಕೊಂಡು ಬಂದರು. ಶುಕ್ರವಾರ ಮುಂಜಾನೆ ವಿಮಾನ ದೆಹಲಿಯ ಪಾಲಂ ಏರ್ಪೋರ್ಟ್ಗೆ ಬಂದಿಳಿಯಿತು. ನಂತರ ಬಿಗಿ ಭದ್ರತೆಯ ನಡುವೆ ಆತನನ್ನು ಸಿಬಿಐ ಕೇಂದ್ರ ಕಚೇರಿಗೆ ಕರೆದುಕೊಂಡು ಹೋಗಲಾಯಿತು. [ಬಾಲಿ ದ್ವೀಪದಲ್ಲಿ ಛೋಟಾ ರಾಜನ್ ಬಂಧನ]

ಬಾಲಿ ದ್ವೀಪದಲ್ಲಿ ಅಕ್ಟೋಬರ್ 26ರಂದು ರಾಜೇಂದ್ರ ಸದಾಶಿವ್ ನಿಕ್ಲಾಜೆ ಅಲಿಯಾಸ್ ಛೋಟಾ ರಾಜನ್ನನ್ನು ಇಂಡೋನೇಷಿಯಾದ ಪೊಲೀಸರು ಬಂಧಿಸಿದ್ದರು. ಮಂಗಳವಾರವೇ ಆತನನ್ನು ಭಾರತಕ್ಕೆ ಕರೆತರಲು ಸಿದ್ಧತೆ ನಡೆದಿತ್ತು. ಆದರೆ, ಜ್ವಾಲಾಮುಖಿಯ ಕಾರಣ ವಿಮಾನಗಳ ಸಂಚಾರ ರದ್ದುಗೊಂಡಿದ್ದರಿಂದ ಶುಕ್ರವಾರ ಕರೆತರಲಾಗಿದೆ. [ಛೋಟಾ ರಾಜನ್ : ಡಾನ್ ಆಗಿದ್ದು ಹೇಗೆ?]
ಮುಂಬೈಗೆ ಸ್ಥಳಾಂತರವಿಲ್ಲ : ಇಂದು ಮಧ್ಯಾಹ್ನದ ವೇಳೆಗೆ ರಾಜನ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಸಿಬಿಐ ಅಧಿಕಾರಗಳು, ಬಳಿಕ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಳ್ಳಲಿದ್ದಾರೆ. ದೆಹಲಿಯಲ್ಲಿಯೇ ಸಿಬಿಐ ಮತ್ತು ಎನ್ಐಎ ಅಧಿಕಾರಿಗಳು ಆತನ ವಿಚಾರಣೆ ನಡೆಸಲಿದ್ದಾರೆ. [ಭಾರತಕ್ಕೆ ಹೋದ್ರೆ ನಾನು ಫಿನಿಷ್: ರಾಜನ್]
ಭದ್ರತಾ ದೃಷ್ಟಿಯಿಂದ ಛೋಟಾ ರಾಜನ್ನನ್ನು ಮುಂಬೈಗೆ ಕರೆದುಕೊಂಡು ಹೋಗುವ ಸಾಧ್ಯತೆ ಕಡಿಮೆ ಎಂದು ತಿಳಿದುಬಂದಿದೆ. ಮುಂಬೈನಲ್ಲಿ ರಾಜನ್ ವಿರುದ್ಧ 65ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಸಿಬಿಐಗೆ ಹಸ್ತಾಂತರ ಮಾಡುವ ಕುರಿತು ಮಹಾರಾಷ್ಟ್ರ ಸರ್ಕಾರ ಮಾತುಕತೆ ನಡೆಸುತ್ತಿದೆ.
ವಿಶೇಷ ವಿಮಾನ, ಬಿಗಿ ಭದ್ರತೆ : ಛೋಟಾ ರಾಜನ್ ಕರೆತರಲು ಭಾರತದಿಂದ ವಿಶೇಷ ವಿಮಾನ ಕಳುಹಿಸಲಾಗಿತ್ತು. ಬಾಲಿಯಲ್ಲಿನ ಏರ್ಪೋರ್ಟ್ಗೆ ಆತನನ್ನು ಬಿಗಿ ಭದ್ರತೆಯಲ್ಲಿ ಕರೆತರಲಾಯಿತು. ಮುಂಬೈ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ತಂಡ ಛೋಟಾ ರಾಜನ್ ಕರೆತರಲು ಬಾಲಿಗೆ ತೆರಳಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications