ನರೇಂದ್ರ ಮೋದಿ ಪ್ರಭಾವಕ್ಕೊಳಗಾಗಿ ಬಿಜೆಪಿ ಸೇರ್ಪಡೆ: ಗಂಭೀರ್
Recommended Video

ನವದೆಹಲಿ, ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದಿಂದ ಪ್ರಭಾವಿತರಾಗಿ ತಾವು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
'ನರೇಂದ್ರ ಮೋದಿ ಅವರ ದೃಷ್ಟಿಕೋನದ ಪ್ರಭಾವಕ್ಕೆ ಒಳಗಾಗಿದ್ದೇನೆ. ಕ್ರಿಕೆಟ್ ಕ್ಷೇತ್ರಕ್ಕೆ ಒಂದಷ್ಟು ಕೊಡುಗೆ ನೀಡಿದ್ದೇನೆ. ಈಗ ದೇಶಕ್ಕಾಗಿ ಮತ್ತಷ್ಟು ಕೆಲಸ ಮಾಡುವ ಭರವಸೆ ಹೊಂದಿದ್ದೇನೆ' ಎಂದು 37 ವರ್ಷದ ಗಂಭೀರ್, ಪಕ್ಷ ಸೇರ್ಪಡೆ ಬಳಿಕ ತಿಳಿಸಿದರು.
ಈ ವೇಳೆ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, 'ಗಂಭೀರ್ ವೃತ್ತಿ ಬದುಕಿನಲ್ಲಿ ಅಮೋಘ ಪ್ರದರ್ಶನ ತೋರಿಸಿದ್ದಾರೆ. ಪಕ್ಷವು ಅವರ ಪ್ರತಿಭೆಯನ್ನು ಬಳಸಿಕೊಳ್ಳುವ ವಿಶ್ವಾಸದಲ್ಲಿದೆ. ಅವರ ಪ್ರತಿಭೆಯಿಂದ ಬಿಜೆಪಿಗೆ ಲಾಭವಾಗಲಿದೆ' ಎಂದರು.

ಗಂಭೀರ್ ಅವರು ದೆಹಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ, ಪಕ್ಷದ ಚುನಾವಣಾ ಸಮಿತಿ ಅದನ್ನು ನಿರ್ಧರಿಸಲಿದೆ ಎಂದು ತಿಳಿಸಿದರು.
'ಮೋದಿಯಿಂದ ಪ್ರಭಾವಿತೆ'
ಇತ್ತೀಚೆಗಷ್ಟೇ ಬಿಜೆಪಿ ಸೇರಿಕೊಂಡಿರುವ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವಕ್ಕೆ ಒಳಗಾಗಿ ಪಕ್ಷವನ್ನು ಸೇರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
ಕಳೆದ ವರ್ಷ ಪತಿ ರವೀಂದ್ರ ಜಡೇಜಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಅನೌಪಚಾರಿಕವಾಗಿ ಭೇಟಿಯಾಗಿದ್ದೆ. ಆಗಿನಿಂದ ಅವರ ಪ್ರಭಾವಕ್ಕೆ ಒಳಗಾಗಿದ್ದಾಗಿ ಹೇಳಿದ್ದಾರೆ.

29 ವರ್ಷದ ರಿವಾಬಾ ಅವರು ಭಾರತ ಕ್ರಿಕೆಟ್ ತಂಡವು ಕಳೆದ ವರ್ಷ ನವೆಂಬರ್ನಲ್ಲಿ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ದೆಹಲಿಯಲ್ಲಿ ಪತಿ ಜೊತೆ ಮೋದಿ ಅವರನ್ನು ಭೇಟಿ ಮಾಡಿದ್ದರು. ಭೇಟಿಯ ಬಳಿಕ ಮೋದಿ ಈ ಜೋಡಿಯೊಂದಿಗೆ ಇರುವ ಫೋಟೊವನ್ನು ಟ್ವೀಟ್ ಮಾಡಿದ್ದರು.
'ಸರ್ ಸಾಕಷ್ಟು ಒಳ್ಳೆಯ ಸಂಗತಿಗಳನ್ನು ಹೇಳಿದ್ದರು. ಸರ್ಕಾರವು ಮಾಡುತ್ತಿರುವ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳಿಸಿದ್ದರು. ನಾವು ವೈಯಕ್ತಿಕವಾಗಿ ತೀವ್ರ ಪ್ರಭಾವಿತಗೊಂಡಿದ್ದೆವು. ರವಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಟಿದ್ದರು. ಹೀಗಾಗಿ ನಾವು ಕ್ರಿಕೆಟ್ ಕುರಿತೂ ಸ್ವಲ್ಪ ಮಾತನಾಡಿದ್ದೆವು' ಎಂದು ರಿವಾಬಾ ತಿಳಿಸಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications