ನರೇಂದ್ರ ಮೋದಿ ಪ್ರಭಾವಕ್ಕೊಳಗಾಗಿ ಬಿಜೆಪಿ ಸೇರ್ಪಡೆ: ಗಂಭೀರ್
Recommended Video

ನವದೆಹಲಿ, ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನದಿಂದ ಪ್ರಭಾವಿತರಾಗಿ ತಾವು ಬಿಜೆಪಿ ಸೇರ್ಪಡೆಯಾಗಿರುವುದಾಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
'ನರೇಂದ್ರ ಮೋದಿ ಅವರ ದೃಷ್ಟಿಕೋನದ ಪ್ರಭಾವಕ್ಕೆ ಒಳಗಾಗಿದ್ದೇನೆ. ಕ್ರಿಕೆಟ್ ಕ್ಷೇತ್ರಕ್ಕೆ ಒಂದಷ್ಟು ಕೊಡುಗೆ ನೀಡಿದ್ದೇನೆ. ಈಗ ದೇಶಕ್ಕಾಗಿ ಮತ್ತಷ್ಟು ಕೆಲಸ ಮಾಡುವ ಭರವಸೆ ಹೊಂದಿದ್ದೇನೆ' ಎಂದು 37 ವರ್ಷದ ಗಂಭೀರ್, ಪಕ್ಷ ಸೇರ್ಪಡೆ ಬಳಿಕ ತಿಳಿಸಿದರು.
ಈ ವೇಳೆ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, 'ಗಂಭೀರ್ ವೃತ್ತಿ ಬದುಕಿನಲ್ಲಿ ಅಮೋಘ ಪ್ರದರ್ಶನ ತೋರಿಸಿದ್ದಾರೆ. ಪಕ್ಷವು ಅವರ ಪ್ರತಿಭೆಯನ್ನು ಬಳಸಿಕೊಳ್ಳುವ ವಿಶ್ವಾಸದಲ್ಲಿದೆ. ಅವರ ಪ್ರತಿಭೆಯಿಂದ ಬಿಜೆಪಿಗೆ ಲಾಭವಾಗಲಿದೆ' ಎಂದರು.

ಗಂಭೀರ್ ಅವರು ದೆಹಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ, ಪಕ್ಷದ ಚುನಾವಣಾ ಸಮಿತಿ ಅದನ್ನು ನಿರ್ಧರಿಸಲಿದೆ ಎಂದು ತಿಳಿಸಿದರು.
'ಮೋದಿಯಿಂದ ಪ್ರಭಾವಿತೆ'
ಇತ್ತೀಚೆಗಷ್ಟೇ ಬಿಜೆಪಿ ಸೇರಿಕೊಂಡಿರುವ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವಕ್ಕೆ ಒಳಗಾಗಿ ಪಕ್ಷವನ್ನು ಸೇರಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
ಕಳೆದ ವರ್ಷ ಪತಿ ರವೀಂದ್ರ ಜಡೇಜಾ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಅನೌಪಚಾರಿಕವಾಗಿ ಭೇಟಿಯಾಗಿದ್ದೆ. ಆಗಿನಿಂದ ಅವರ ಪ್ರಭಾವಕ್ಕೆ ಒಳಗಾಗಿದ್ದಾಗಿ ಹೇಳಿದ್ದಾರೆ.

29 ವರ್ಷದ ರಿವಾಬಾ ಅವರು ಭಾರತ ಕ್ರಿಕೆಟ್ ತಂಡವು ಕಳೆದ ವರ್ಷ ನವೆಂಬರ್ನಲ್ಲಿ ಆಸ್ಟ್ರೇಲಿಯಾಕ್ಕೆ ತೆರಳುವ ಮುನ್ನ ದೆಹಲಿಯಲ್ಲಿ ಪತಿ ಜೊತೆ ಮೋದಿ ಅವರನ್ನು ಭೇಟಿ ಮಾಡಿದ್ದರು. ಭೇಟಿಯ ಬಳಿಕ ಮೋದಿ ಈ ಜೋಡಿಯೊಂದಿಗೆ ಇರುವ ಫೋಟೊವನ್ನು ಟ್ವೀಟ್ ಮಾಡಿದ್ದರು.
'ಸರ್ ಸಾಕಷ್ಟು ಒಳ್ಳೆಯ ಸಂಗತಿಗಳನ್ನು ಹೇಳಿದ್ದರು. ಸರ್ಕಾರವು ಮಾಡುತ್ತಿರುವ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳಿಸಿದ್ದರು. ನಾವು ವೈಯಕ್ತಿಕವಾಗಿ ತೀವ್ರ ಪ್ರಭಾವಿತಗೊಂಡಿದ್ದೆವು. ರವಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಟಿದ್ದರು. ಹೀಗಾಗಿ ನಾವು ಕ್ರಿಕೆಟ್ ಕುರಿತೂ ಸ್ವಲ್ಪ ಮಾತನಾಡಿದ್ದೆವು' ಎಂದು ರಿವಾಬಾ ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications