ಕೋವಿಡ್ ಔಷಧ ದಾಸ್ತಾನು: ಗಂಭೀರ್ ಫೌಂಡೇಷನ್ ತಪ್ಪು ಸಾಬೀತು
ನವದೆಹಲಿ, ಜೂನ್ 03: ಕೋವಿಡ್ 19 ಔಷಧ ದಾಸ್ತಾನಿಗೆ ಸಂಬಂಧಿಸಿದಂತೆ ಗೌತಮ್ ಗಂಭೀರ್ ಫೌಂಡೇಷನ್ ತಪ್ಪು ಸಾಬೀತಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಈ ಬಗ್ಗೆ ಗಮನ ಹರಿಸಿದ್ದ ದೆಹಲಿ ಹೈಕೋರ್ಟ್ ದೇಶಾದ್ಯಂತ ವ್ಯಾಪಕ ಕೊರತೆ ಇರುವ ಪರಿಸ್ಥಿತಿಯಲ್ಲಿ ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ಯಥೇಚ್ಛವಾಗಿ ಈ ಔಷಧಿಗಳನ್ನು ಸಂಗ್ರಹಿಸಿದ್ದು ಹೇಗೆ..? ಇದಕ್ಕೆ ಯಾವ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ದೆಹಲಿ ಹೈಕೋರ್ಟ್ ದೆಹಲಿಯ ಔಷಧ ನಿಯಂತ್ರಕರನ್ನು ಪ್ರಶ್ನಿಸಿತ್ತು.
ಇದೀಗ ಇದೇ ಪ್ರಕರಣದ ವಿಚಾರಣೆಯಲ್ಲಿ ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ಇದೇ ಪ್ರಕರಣದಲ್ಲಿ ಶಾಸಕ ಪ್ರವೀಣ್ ಕುಮಾರ್ ಅವರನ್ನೂ ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ತಪ್ಪಿತಸ್ಥರು ಎಂದು ಹೇಳಿದೆ.

ಕೋವಿಡ್-19 ರೋಗಿಗಳ ಔಷಧಿಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿ ವಿತರಣೆ ಮಾಡಿದ್ದ ಆರೋಪದಲ್ಲಿ ಗೌತಮ್ ಗಂಭೀರ್ ಪ್ರತಿಷ್ಠಾನವು ತಪ್ಪಿತಸ್ಥರೆಂದು ದೆಹಲಿ ಹೈಕೋರ್ಟ್ ಹೇಳಿದೆ.
ಅಂತೆಯೇ ಆರು ವಾರಗಳಲ್ಲಿ ಈ ಪ್ರಕರಣಗಳಲ್ಲಿ ಹೆಚ್ಚಿನ ಪ್ರಗತಿಯ ಕುರಿತು ಸ್ಥಿತಿ ವರದಿಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಔಷಧ ನಿಯಂತ್ರಕ ಪ್ರಾಧಿಕಾರವನ್ನು ಕೇಳಿದೆ ಮತ್ತು ಅಂತೆಯೇ ಜುಲೈ 29ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಕೋವಿಡ್ ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿದ್ದ ಅತ್ಯಾವಶ್ಯಕ ಫ್ಯಾಬಿ ಫ್ಲೂ ಮಾತ್ರೆಗಳನ್ನು ಗೌತಮ್ ಗಂಭೀರ್ ಫೌಂಡೇಷನ್ ಸಂಸ್ಥೆ ಸಂಗ್ರಹಿಸಿ ವಿತರಣೆ ಮಾಡಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications