ಹೆತ್ತ ಮಗು ತಾಯಿಯ ಮಡಿಲು ಸೇರಲು 2,000 ರೂಪಾಯಿ ಲಂಚ!
ನವದೆಹಲಿ, ಡಿಸೆಂಬರ್.04: ಸರ್ಕಾರಿ ಆಸ್ಪತ್ರೆಗಳಲ್ಲಿ ಕಾಸು ಬಿಚ್ಚಿದರೆ ಮಾತ್ರ ಕೆಲಸ ಆಗುತ್ತೆ ಎಂಬ ಆರೋಪಗಳು ಮೊದಲಿನಿಂದಲೂ ಇವೆ. ವೈದ್ಯಕೀಯ ಚಿಕಿತ್ಸೆ, ಇಂಜೆಕ್ಷನ್, ಔಷಧಿ ಮತ್ತು ತಪಾಸಣೆಗಳೆಲ್ಲ ಓಕೆ. ಆದರೆ ನವದೆಹಲಿಯಲ್ಲಿ ಇದೆಲ್ಲವನ್ನೂ ಮೀರಿಸುವಂತಾ ಘಟನೆಯೊಂದು ವರದಿಯಾಗಿದೆ.
ಹೆತ್ತ ತಾಯಿ ತನ್ನ ಮಗುವನ್ನು ಪಡೆದುಕೊಳ್ಳಲು ಆಸ್ಪತ್ರೆ ಸಿಬ್ಬಂದಿಗೆ 2,000 ರೂಪಾಯಿ ಲಂಚ ನೀಡಿರುವುದಾಗಿ ಆರೋಪಿಸಿದ್ದಾರೆ. ಘಜಿಯಾಬಾದ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂಥದೊಂದು ಘಟನೆ ನಡೆದಿದೆ. ತಾಯಿಗೆ ವೈದ್ಯಕೀಯ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ತೋರಿದ ಬಗ್ಗೆ ಆರೋಪಿಸಿದ ಸಂದರ್ಭದಲ್ಲಿ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಘಜಿಯಾಬಾದ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಯು ಆಗಷ್ಟು ಜನಿಸಿದ ಮಗುವನ್ನು ತಾಯಿಗೆ ನೀಡಲು ಹಣದ ಬೇಡಿಕೆ ಇಟ್ಟಿದ್ದರು. 3,000 ರೂಪಾಯಿ ನೀಡಿದರಷ್ಟೇ ಮಗುವನ್ನು ಕೊಡುವುದಾಗಿ ಹೇಳಿದ್ದರು. ಕುಟುಂಬ ಸದಸ್ಯರು ಅಂತಿಮವಾಗಿ 2,000 ರೂಪಾಯಿ ಹಣ ನೀಡಿದ ನಂತರವಷ್ಟೇ ಮಗುವನ್ನು ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಮಹಿಳೆ ಆರೋಪದ ಬಗ್ಗೆ ಸಂಪೂರ್ಣ ತನಿಖೆ:
ಹೆತ್ತ ಮಗುವನ್ನು ತಾಯಿಗೆ ನೀಡಲು ವೈದ್ಯಕೀಯ ಸಿಬ್ಬಂದಿಯು ಹಣದ ಬೇಡಿಕೆಯಿಟ್ಟಿರುವ ಬಗ್ಗೆ ತಮಗೆ ಯಾವುದೇ ರೀತಿ ಮಾಹಿತಿಯಿಲ್ಲ ಎಂದು ಘಜಿಯಾಬಾದ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಸಂಗೀತಾ ಗೋಯೆಲ್ ತಿಳಿಸಿದ್ದಾರೆ. ಈಗಷ್ಟೇ ಪ್ರಕರಣವು ತಮ್ಮ ಗಮನಕ್ಕೆ ಬಂದಿದೆ. ಮಹಿಳೆ ಆರೋಪದ ಬಗ್ಗೆ ಸಂಪೂರ್ಣ ಘಟನೆಯ ತನಿಖೆ ನಡೆಸಿದ ನಂತರದಲ್ಲಿ ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications