ಗುಲಾಂ, ಕಮಲ್ ನಾಥ್ ಗೆ ಉನ್ನತ ಸ್ಥಾನ ನೀಡಿದ ಕಾಂಗ್ರೆಸ್
ನವದೆಹಲಿ, ಜೂನ್ 12: ಮುಂಬರುವ ಚುನಾವಣೆಗಳಿಗೆ ಪೂರ್ವ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷ ತನ್ನ ಹಿರಿಯ ನಾಯಕರಿಗೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸುವ ಪ್ರಕ್ರಿಯೆಗೆ ಭಾನುವಾರದಿಂದ ಚಾಲನೆ ನೀಡಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಲಾಂ ನಬಿ ಅಜಾದ್ ಅವರಿಗೆ ಉತ್ತರಪ್ರದೇಶ ಹಾಗೂ ಕಮಲ್ ನಾಥ್ ಅವರಿಗೆ ಪಂಜಾಬ್, ಹರ್ಯಾಣ ಅಸೆಂಬ್ಲಿ ಚುನಾವಣೆ ಉಸ್ತುವಾರಿ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಮತ್ತು ಕಮಲ್ ನಾಥ್ ಅವರನ್ನು ಭಾನುವಾರದಿಂದ ಜಾರಿಗೆ ಬರುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. 2017ರ ಆರಂಭದಲ್ಲಿ ಉತ್ತರಪ್ರದೇಶ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಪೂರ್ವ ಸಿದ್ದತೆ ನಡೆಸಿದ್ದು, ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಚುಕ್ಕಾಣಿ ನೀಡುವ ಸುದ್ದಿಗೆ ಮತ್ತೆ ರೆಕ್ಕೆ ಪುಕ್ಕ ಸೇರಿಕೊಂಡಿದೆ.

67 ವರ್ಷದ ಅಜಾದ್ ಅವರು ಗಾಂಧಿ ಮನೆತನ ನಂಬಿಕಸ್ತ ಸಿಪಾಯಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎರಡು ಬಾರಿ ಕರ್ತವ್ಯ ನಿರ್ವಹಿಸಿದ್ದಾರೆ. ಉತ್ತರಪ್ರದೇಶ ಉಸ್ತುವಾರಿಯನ್ನು ನಿಭಾಯಿಸಿದ ಅನುಭವವಿದೆ.
69 ವರ್ಷ ವಯಸ್ಸಿನ ಕಮಲ್ ನಾಥ್ ಅವರು ಮಧ್ಯಪ್ರದೇಶದ ಹಿರಿಯ ನಾಯಕರಾಗಿದ್ದು, ಚಿಂದ್ವಾರದಿಂದ ಸಂಸತ್ತಿಗೆ 9 ಬಾರಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಗುಜರಾತ್ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಉಸ್ತುವಾರಿ ವಹಿಸಿಕೊಂಡಿದ್ದರು. ಮಧ್ಯಪ್ರದೇಶದ ಸಿಎಂ ಸ್ಥಾನದ ಮೇಲೆ ಮತ್ತೆ ಆಸೆ ಇರಿಸಿಕೊಂಡಿದ್ದಾರೆ.
ಉತ್ತರಪ್ರದೇಶದಲ್ಲಿ ಸದ್ಯ ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದರೆ, ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿದಳ ಹಾಗೂ ಬಿಜೆಪಿ ಅಧಿಕಾರದಲ್ಲಿದೆ. ಹರ್ಯಾಣದಲ್ಲಿ ಬಿಜೆಪಿ ರಾಜ್ಯಭಾರ ಮಾಡುತ್ತಿದೆ. (ಪಿಟಿಐ)
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications