ಗೋಧ್ರಾ ಗಲಭೆ: ಜಾಮೀನು ಸಿಕ್ಕರೂ 17 ಮಂದಿ ಗುಜರಾತ್ ಗೆ ಕಾಲಿಡುವಂತಿಲ್ಲ
ನವದೆಹಲಿ, ಜನವರಿ.28: ಗೋಧ್ರಾ ಗಲಭೆ ಪ್ರಕರಣದ 17 ಅಪರಾಧಿಗಳಿಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿದೆ.
ಮಂಗಳವಾರ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠವು ಮಹತ್ವದ ತೀರ್ಪನ್ನು ಹೊರಡಿಸಿದೆ. ನ್ಯಾ. ಎಸ್.ಎ.ಬೋಬ್ದೆ, ನೇತೃತ್ವದ ನ್ಯಾ. ಬಿ.ಆರ್.ಗವೈ, ನ್ಯಾ.ಸೂರ್ಯಕಾಂತ್ ಅವರಿದ್ದ ಪೀಠವು 17 ಅಪರಾಧಿಗಳಿಗೆ ಜಾಮೀನು ನೀಡಿದ್ದು, ಗುಜರಾತ್ ಗೆ ಕಾಲಿಡದಂತೆ ಖಡಕ್ ಎಚ್ಚರಿಕೆ ನೀಡಿದೆ.
17 ಅಪರಾಧಿಗಳನ್ನು ಎರಡು ತಂಡಗಳಾಗಿ ವಿಂಗಡಿಸಿರುವ ಸುಪ್ರೀಂಕೋರ್ಟ್ ಒಂದೊಂದು ಗುಂಪಿಗೆ ಒಂದೊಂದು ಷರತ್ತು ವಿಧಿಸಲಾಗಿದೆ. ಒಂದು ಅಪರಾಧಿಗಳ ತಂಡಕ್ಕೆ ಇಂದೋರ್ ನಲ್ಲಿ ವಾಸಿಸಲು ಸೂಚನೆ ನೀಡಲಾಗಿದೆ. ಇನ್ನೊಂದು ಅಪರಾಧಿಗಳ ಗುಂಪು ಮಧ್ಯಪ್ರದೇಶದ ಜಬಲ್ ಪುರ್ ಗೆ ಸ್ಥಳಾಂತರಗೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಲು ಸೂಚನೆ:
ಗೋಧ್ರಾ ಗಲಭೆ ಪ್ರಕರಣದ 17 ಅಪರಾಧಿಗಳಿಗೆ ಜಾಮೀನು ನೀಡಿರುವ ಸುಪ್ರೀಂಕೋರ್ಟ್, ಎಲ್ಲ ಅಪರಾಧಿಗಳು ಮಧ್ಯಪ್ರದೇಶದಲ್ಲಿ ವಾಸಿಸಬೇಕು. ಅಲ್ಲಿಯೇ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕಟ್ಟಪ್ಪಣೆ ಹೊರಡಿಸಿದೆ.
2002ರಲ್ಲಿ ಸರ್ದಾರ್ ಪುರ್ ಗ್ರಾಮದಲ್ಲಿ 33 ಮುಸ್ಲಿಮರನ್ನು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ ಅಪರಾಧಿಗಳಿಗೆ ಗುಜರಾತ್ ಹೈಕೋರ್ಟ್ ಜೀವಾವಧಿ ಶಿಕ್ಷೆಯನ್ನು ಘೋಷಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದೀಗ 17 ಅಪರಾಧಿಗಳಿಗೆ ಜೈಲಿನಿಂದ ಮುಕ್ತಿ ನೀಡಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications