ನೋಟ್ ಆಯ್ತು ಈಗ ಚಿನ್ನ ಖರೀದಿ ಮೇಲೆ ನಿರ್ಬಂಧ!
ಅಧಿಕ ಮುಖಬೆಲೆಯ ನೋಟುಗಳ ನಿಷೇಧದ ನಂತರ ಈಗ ಕೇಂದ್ರ ಸರ್ಕಾರ ಚಿನ್ನದ ಖರೀದಿ ಮೇಲೆ ನಿರ್ಬಂಧ ವಿಧಿಸಲು ಮುಂದಾಗಿದೆ.
ನವದೆಹಲಿ, ಡಿಸೆಂಬರ್, 1: ಕಪ್ಪು ಹಣ ಪತ್ತೆಗೆ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿ ಕ್ರಮಕೈಗೊಳ್ಳಲು ಮುಂದಾಗಿದ್ದು, ನೋಟು ನಿಷೇಧದ ನಂತರ ಈಗ ಚಿನ್ನದ ಮೇಲೆ ನಿರ್ಬಂಧ ಹೇರಲು ತೀರ್ಮಾನಿಸಿದೆ.
ಮನೆಯಲ್ಲಿ ಕೆ.ಜಿಗಟ್ಟಲೆ ಚಿನ್ನ ಇಟ್ಟುಕೊಂಡಿರುವವರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಚಿನ್ನ ಶೇಖರಣೆ ಬಗ್ಗೆ ಆದಾಯ ತೆರಿಗೆ ಮಸೂದೆಗೆ ತಿದ್ದುಪಡಿ ಮಾಡುವುದಾಗಿ ಗುರುವಾರ ಕೇಂದ್ರ ಹಣಕಾಸು ಇಲಾಖೆ ಪ್ರಕಟಿಸಿದೆ.
ಕಾಳಧನಿಕರು ತಮ್ಮ ಅಕ್ರಮ ಹಣವನ್ನು ಚಿನ್ನ ಖರೀದಿಗೆ ಬಳಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ನಿರ್ಬಂಧ ಹೇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಘೋಷಿತ ಆದಾಯದಿಂದ ಖರೀದಿ ಮಾಡಿದ, ಸಕ್ರಮ ಹಣದಿಂದ ಸಂಪಾದನೆ ಮಾಡಿದ ಚಿನ್ನದ ಮೇಲೆ ಯಾವುದೇ ತೆರಿಗೆ ವಿಧಿಸುವುದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಚಿನ್ನದ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧಗಳು
* ವಿವಾಹಿತ ಮಹಿಳೆಯೊಬ್ಬರು ಗರಿಷ್ಠ 500 ಗ್ರಾಂ. ಚಿನ್ನ ಇಟ್ಟುಕೊಳ್ಳಲು ಅವಕಾಶ
* ಅವಿವಾಹಿತ ಮಹಿಳೆಯರು ಗರಿಷ್ಠ 250 ಗ್ರಾಂ ಚಿನ್ನ ಇಟ್ಟುಕೊಳ್ಳಬಹುದು
* ಪುರುಷರು ಗರಿಷ್ಠ 100 ಗ್ರಾಂ. ಚಿನ್ನ ಖರೀದಿ ಮಾಡಬಹುದು
* ವಂಶಪಾರಂಪರಿಕ ಚಿನ್ನದ ಮೇಲೆ ತೆರಿಗೆ ಇಲ್ಲ
* ಕೃಷಿ ಮೂಲದಿಂದ ಖರೀದಿ ಮಾಡಿದ ಚಿನ್ನದ ಮೇಲೆ ತೆರಿಗೆ ಇಲ್ಲ
* ಆದಾಯ ಮೀರಿ ಗಳಿಸಿದ ಚಿನ್ನದ ಮೇಲೆ ತೆರಿಗೆ ವಿಧಿಸಲು ಕೇಂದ್ರ ನಿರ್ಧರಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications