'ಕೋವಿಡ್ ಸಂದರ್ಭ ವೈದ್ಯಕೀಯ ಉತ್ಪನ್ನಗಳ ಮೇಲಿನ ಜಿಎಸ್ಟಿ ರದ್ದು ಮಾಡಿ' - ಪ್ರಿಯಾಂಕ ಆಗ್ರಹ
ನವದೆಹಲಿ, ಮೇ 28: ಜಿಎಸ್ಟಿ ಕೌನ್ಸಿಲ್ ಸಭೆಯು ಇಂದು (ಮೇ 28) ನಡೆಯಲಿದ್ದು, ಈಗಾಗಲೇ ಗುರುವಾರ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರುಗಳು ಸಭೆ ಜಿಎಸ್ಟಿ ನಷ್ಟ ಪರಿಹಾರ ಬೇಡಿಕೆ ಮುಂದಿಡಲು ನಿರ್ಧರಿಸಿದ್ದಾರೆ. ಹಾಗೆಯೇ ತಮ್ಮ ಹಲವು ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ.
ಈ ನಡುವೆ ಶುಕ್ರವಾರ ಕಾಂಗ್ರೆಸ್ ಮುಖಂಡೆ ಪ್ರಿಯಾಂಕ ಗಾಂಧಿ ವಾದ್ರಾ, ''ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಗತ್ಯ ವೈದ್ಯಕೀಯ ಉತ್ಪನ್ನಗಳ ಮೇಲೆ ಜಿಎಸ್ಟಿ ಹೇರಬಾರದು. ಸಭೆಯಲ್ಲಿ ಚರ್ಚಿಸಿ ಸರ್ಕಾರ ಈ ಅಗತ್ಯ ವೈದ್ಯಕೀಯ ವಸ್ತುಗಳ ಮೇಲಿನ ಎಸ್ಟಿಯನ್ನು ರದ್ದು ಮಾಡಿ'' ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ, ''ಸಾಂಕ್ರಾಮಿಕ ಸಮಯದಲ್ಲಿ ಅಗತ್ಯ ವೈದ್ಯಕೀಯ ಉತ್ಪನ್ನಗಳಾದ ಆಮ್ಲಜನಕ, ವೆಂಟಿಲೇಟರ್ಗಳು, ಲಸಿಕೆಗಳು ಮತ್ತು ಔಷಧಿಗಳ ಮೇಲೆ ಜಿಎಸ್ಟಿ ಹೇರುವುದು ಕ್ರೂರ ಮತ್ತು ಅಸೂಕ್ಷ್ಮ ವಿಚಾರ. ಇಂದಿನ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ, ಕೋವಿಡ್ ವಿರುದ್ಧ ಹೋರಾಡಲು ಬಳಸಲಾಗುವ ಎಲ್ಲಾ ಜೀವ ಉಳಿಸುವ ಔಷಧಿಗಳು ಮತ್ತು ಸಾಧನಗಳಿಗೆ ಸರ್ಕಾರ ಜಿಎಸ್ಟಿಯನ್ನು ತೆಗೆದುಹಾಕಬೇಕು'' ಎಂದು ಒತ್ತಾಯಿಸಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರ ಅಗತ್ಯ ವೈದ್ಯಕೀಯ ಉತ್ಪನ್ನಗಳ ಮೇಲೆ ಹೇರುವ ಜಿಎಸ್ಟಿಯ ಪಟ್ಟಿಯನ್ನು ಉಲ್ಲೇಖ ಮಾಡಿದ್ದಾರೆ.

ಶುಕ್ರವಾರ ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಲಿದೆ. ಗುರುವಾರವೇ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರುಗಳು ವರ್ಚುವಲ್ ಸಭೆ ಸೇರಿದ್ದಾರೆ. ಈ ಸಭೆಯನ್ನು ರಾಜಸ್ಥಾನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಶಾಂತಿ ಕುಮಾರ್ ಧರಿವಾಲ್ ಅಯೋಜಿಸಿದ್ದು ಸಭೆಯಲ್ಲಿ ಹಣಕಾಸು ಸಚಿವರಾದ ಅಮಿತ್ ಮಿತ್ರಾ (ಪಶ್ಚಿಮ ಬಂಗಾಳ), ಮನ್ ಪ್ರೀತ್ ಸಿಂಗ್ ಬಾದಲ್ (ಪಂಜಾಬ್), ರಾಮೇಶ್ವರ ಒರಾನ್ (ಜಾರ್ಖಂಡ್), ಟಿ.ಎಸ್. ಸಿಂಗ್ ಡಿಯೋ (ಛತ್ತೀಸ್ ಗಢ), ಕೆ.ಎನ್. ಬಾಲಗೋಪಾಲ್ (ಕೇರಳ) ಮತ್ತು ಪಿ.ಟಿ.ಆರ್. ಪಳನಿವೇಲ್ ತ್ಯಾಗರಾಜನ್ (ತಮಿಳುನಾಡು) ಸಭೆಯಲ್ಲಿ ಭಾಗವಹಿಸಿದ್ದರು.
''ರಾಜ್ಯಗಳಿಗೆ ತೆರಿಗೆ ನಷ್ಟವನ್ನು ಸರಿದೂಗಿಸಬೇಕು ಮತ್ತು ರಾಜ್ಯ ದೇಶೀಯ ಉತ್ಪನ್ನಗಳಿಗೆ ಹೆಚ್ಚುವರಿ ಸಾಲ ಮಿತಿಯನ್ನು ಒಟ್ಟು ಶೇ. 5 ರಷ್ಟು ಹೆಚ್ಚಿಸಬೇಕು. ಕೋವಿಡ್ ಸಾಂಕ್ರಾಮಿಕ ವಿರುದ್ಧ ಹೋರಾಡಲು ಖರೀದಿಸಲಾದ ಸರಕುಗಳ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನಾ ಮಾಡಬೇಕು'' ಎಂಬ ತಮ್ಮ ಬೇಡಿಕೆಗಳನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಪರಿಣಾಮಕಾರಿಯಾಗಿ ಪ್ರಸ್ತಾಪಿಸಲು ಏಳು ರಾಜ್ಯಗಳ ಸಚಿವರುಗಳು ನಿರ್ಧಾರಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications