ಹಾಡಹಗಲೇ ಯುವತಿಯ ಅಪಹರಣ, ಸಿಸಿಟಿವಿಯಲ್ಲಿ ಸೆರೆ
ನವದೆಹಲಿ, ಡಿಸೆಂಬರ್,28: ರಾಜಧಾನಿ ನವದೆಹಲಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬುದು ಮತ್ತೇ ಮತ್ತೇ ಸಾಬೀತಾಗುತ್ತಿದೆ. ದುಷ್ಕರ್ಮಿಗಳು ಕಾಲೇಜು ಯುವತಿಯನ್ನು ಹಾಡಹಗಲೇ ಅಪಹರಣ ಮಾಡಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.
ಅಪಹರಣಕ್ಕೆ ಒಳಗಾದ 19 ವರ್ಷದ ಯುವತಿ ನವದೆಹಲಿಯ ಗುರ್ ಗಾಂವ್ ನಲ್ಲಿರುವ ದ್ರೋಣಾಚಾರ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯನ್ನು ದುಷ್ಕರ್ಮಿಗಳು ಸೋಮವಾರ ಬೆಳಗ್ಗೆ ಬಿಳಿ ಬಣ್ಣದ ಕಾರಿನಲ್ಲಿ ಅಪಹರಿಸಿದ್ದಾರೆ.[ಪ್ರೀತಿ ನಿರಾಕರಿಸಿದವಳಿಗೆ ಚೂರಿ ಹಾಕಿದ ಭಗ್ನ ಪ್ರೇಮಿ]

ಯುವತಿಯು ಕಾಲೇಜಿನಲ್ಲಿ ನಡೆಯುತ್ತಿದ್ದ ಸೆಮಿಸ್ಟರ್ ಪರೀಕ್ಷೆಯನ್ನು ಮುಗಿಸಿ ಹೊರ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9.15ಕ್ಕೆ ಗುರ್ ಗಾಂವ್ ಪೊಲೀಸರಿಗೆ ಮಾಹಿತಿ ದೊರೆತಿದೆ.
ಬೆಳಿಗ್ಗೆ 10.15ರ ವೇಳೆಗೆ ಗುರ್ ಗಾಂವ್ ಪೊಲೀಸರು ಯುವತಿಯ ಹುಡುಕಾಟಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು. ಆಗ ಅಪಹರಣ ಸಂದರ್ಭದಲ್ಲಿ ಆಕೆ ಹಳದಿ ಬಣ್ಣದ ವಸ್ತ್ರ ಧರಿಸಿದ್ದಳು ಎಂದು ತಿಳಿದು ಬಂದಿದೆ.[ಬಯಲಾಯ್ತು ಹುಬ್ಬಳ್ಳಿ ಪ್ರಿನ್ಸಿಪಾಲರ ವಿಕೃತ ಕಾಮುಕತನ]
ತಕ್ಷಣ ವಿಶೇಷ ತಂಡದೊಂದಿಗೆ ಕಾರ್ಯಪ್ರವೃತ್ತರಾದ ಗುರ್ ಗಾಂವ್ ಪೊಲೀಸರು ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ. ಈ ಘಟನೆ ಸಂಬಂಧ ಪ್ರತ್ಯಕ್ಷದರ್ಶಿಗಳು ಗುರುತಿಸಿದ ಮೂವರನ್ನು ಹುಡುಕಲು ಈಗಾಗಲೇ ಪೊಲೀಸ್ ತಂಡ ತಯಾರಾಗಿದ್ದು, ಆದಷ್ಟು ಬೇಗ ಅಪಹರಣಕಾರರನ್ನು ಬಂಧಿಸಲಾಗುವುದು ಎಂದು ಗುರ್ ಗಾಂವ್ ಪೊಲೀಸ್ ಕಮೀಷನರ್ ನವದೀಪ್ ವೈರ್ಕ್ ತಿಳಿಸಿದ್ದಾರೆ.
We don't know yet if the girl is from this college or not: DSD College Principal, on Gurgaon kidnapping pic.twitter.com/Wf2n73Qhf9
— ANI (@ANI_news) December 28, 2015 -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications