ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಂದ್ಯಾಲ ಲಕ್ಷ್ಮೀನಾರಾಯಣಸ್ವಾಮಿ ದತ್ತು ನೂತನ ಸಿಜೆಐ

By Mahesh
|
Google Oneindia Kannada News

ನವದೆಹಲಿ, ಸೆ.28: ಕರ್ನಾಟಕ ಮೂಲದ ನ್ಯಾಯಮೂರ್ತಿ ಹಂದ್ಯಾಲ ಲಕ್ಷ್ಮೀನಾರಾಯಣಸ್ವಾಮಿ ದತ್ತು ಅವರು ಭಾನುವಾರ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಬೆಳಗ್ಗೆ 11.05 ರ ಸುಮಾರಿಗೆ ನಡೆದ ಸರಳ ಸಮಾರಂಭದಲ್ಲಿ ದತ್ತು ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆರ್.ಎಂ ಲೋಧಾ ಅವರ ಸೇವಾ ಅವಧಿ ಶನಿವಾರಕ್ಕೆ ಪೂರ್ಣಗೊಂಡಿದೆ. ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಹುದ್ದೆ ಅಲಂಕರಿಸುತ್ತಿರುವ ನ್ಯಾ.ದತ್ತು ಅವರು ನಾಲ್ಕನೇ ಕನ್ನಡಿಗರಾಗಿದ್ದಾರೆ.

Handyala Lakshminarayanaswamy Dattu swear in as 42nd CJI

ಇದುವರೆಗೂ ಕರ್ನಾಟಕದ ಮೂಲದ ಇ.ಎಸ್‌. ವೆಂಕಟರಾಮಯ್ಯ (1989), ಎಂ.ಎನ್‌. ವೆಂಕಟಾಚಲಯ್ಯ (1993), ಎಸ್‌. ರಾಜೇಂದ್ರ ಬಾಬು (2004) ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಎಚ್.ಎಲ್.ದತ್ತು ಅವರು, ಕೇರಳ ಹಾಗೂ ಪಂಜಾಬ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯ ನಿರ್ವಹಿಸಿದ್ದರು.

ಇವರ ಅವಧಿ 2015ರ ಡಿಸೆಂಬರ್‌ 3ರ ವರೆಗೆ ಇರಲಿದೆ. ಸದ್ಯ ನ್ಯಾ.ದತ್ತು ಅವರು 2ಜಿ ಸ್ಪೆಕ್ಟ್ರಂ ಹಗರಣದ ವಿಚಾರಣೆ ನಡೆಸುತ್ತಿರುವ ಪೀಠದ ನೇತೃತ್ವ ವಹಿಸಿದ್ದಾರೆ. ಈ ಹಿಂದೆ ಅವರನ್ನು ಲೋಕಪಾಲ ಆಯ್ಕೆ ಸಮಿತಿಗೂ ಶಿಫಾರಸು ಮಾಡಲಾಗಿತ್ತು

1950ರ ಡಿ.3ರಂದು ಬಳ್ಳಾರಿ ಜಿಲ್ಲೆಯ ಹಂದ್ಯಾಲದಲ್ಲಿ ಜನಿಸಿದರು. ನಂತರ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ಪ್ರಾಥಮಿಕ ವಿದ್ಯಾಭಾಸ ಮುಂದುವರೆಸಿದರು. ದತ್ತು ಅವರ ತಂದೆ ಬೀರೂರಿನಲ್ಲಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಬಿಎಸ್‌ಸಿ ಎಲ್‌ಎಲ್‌ಬಿ ಪದವೀಧರರಾದ ದತ್ತು 1975ರ ಅ.23ರಂದು ವಕೀಲರಾಗಿ ನೋಂದಾಯಿತರಾದರು. ಅವರು ಮೊದಲು ವಕೀಲಿ ವೃತ್ತಿ ಆರಂಭಿಸಿದ್ದು ಬೆಂಗಳೂರಿನಲ್ಲಿ. ಸಿವಿಲ್‌ , ಕ್ರಿಮಿನಲ್‌, ಸಾಂವಿಧಾನಿಕ ಮತ್ತು ತೆರಿಗೆ ಸಂಬಂಧಿ ವ್ಯಾಜ್ಯಗಳಲ್ಲಿ ಅವರು ವಾದ ಮಾಡುತ್ತಿದ್ದರು.

English summary
Karnataka based Justice H.L.Dattu today take oath as new Chief Justice of India,CJI R.M.Lodha retired on 27 September. President Pranab Mukherjeee approved for Justice Dattu's appointment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X