ನವದೆಹಲಿ ಶಾಲಾ-ಕಾಲೇಜು, ಮದರಸಾ ಪುಸ್ತಕಗಳಲ್ಲೂ ಹನುಮಾನ್ ಚಾಲೀಸ್!
ನವದೆಹಲಿ, ಫೆಬ್ರವರಿ.12: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷವು ಗೆಲುವು ದಾಖಲಿಸಿದ್ದೇ ದಾಖಲಿಸಿದ್ದು. ನವದೆಹಲಿಯಲ್ಲಿ ಇತ್ತೀಚಿಗೆ ಹನುಮಾನ್ ಚಾಲೀಸ್ ಕುರಿತು ಸಖತ್ ಸುದ್ದಿ ಆಗುತ್ತಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹೊಸ ಸವಾಲ್ ಎದುರಾಗಿದೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿಗೆ ಆಂಜನೇಯನ ಆಶೀರ್ವಾದವೇ ಕಾರಣ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಜನರಲ್ ಸಕ್ರೆಟರಿ ಕೈಲಾಶ್ ವಿಜಯ್ ವರ್ಗಿಯಾ ಟ್ವಿಟ್ಟರ್ ನಲ್ಲಿ ಹೊಸ ಸವಾಲು ಎಸೆದಿದ್ದಾರೆ.
ಆಪ್ ದೆಹಲಿಯಲ್ಲಿ ಸರ್ಕಾರ ರಚಿಸುವುದು ಪಕ್ಕಾ ಆಗಿದೆ. ಇದು ಬಿಜೆಪಿಯ ಸೋಲಿನ ಬಗ್ಗೆ ಚರ್ಚಿಸುವ ಸಂದರ್ಭವಲ್ಲ. ಬದಲಿಗೆ ಆಪ್ ಗೆಲುವಿಗೆ ಕಾರಣವಾದ ಹನುಮಾನ್ ಚಾಲೀಸ್ ನ್ನು ದೆಹಲಿಯ ಶಾಲಾ-ಕಾಲೇಜು ಮತ್ತು ಮದರಸಾಗಳ ಪಠ್ಯದಲ್ಲಿ ಸೇರ್ಪಡೆಗೊಳಿಸಬೇಕು ಎಂದು ಸಿಎಂಗೆ ಸಲಹೆ ನೀಡಿದ್ದಾರೆ.

ಹನುಮಾನ್ ಆಶೀರ್ವಾದದಿಂದಲೇ ನವದೆಹಲಿಯಲ್ಲಿ ಆಪ್ ಭರ್ಜರಿ ಗೆಲುವು ದಾಖಲಿಸಿ. ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಹನುಮಾನ್ ಚಾಲೀಸ್ ಪಠಿಸಿದ ಸಿಎಂ ಕೇಜ್ರಿವಾಲ್ ಈಗ ಶಾಲಾ ಪಠ್ಯಯಲ್ಲಿ ಅದೇ ಹನುಮಾನ್ ಚಾಲೀಸ್ ನ್ನು ಸೇರ್ಪಡೆಗೊಳಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದಿದ್ದಾರೆ.
ಇನ್ನು, ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಪ್ರಕಟಿಸಿದೇ ಚುನಾವಣೆ ಎದುರಿಸಿದ ಬಿಜೆಪಿಯ ನಡೆ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರ ನೀಡಿದ ಬಿಜೆಪಿ ಜನರಲ್ ಸಕ್ರೆಟರಿ ಕೈಲಾಶ್ ವಿಜಯ್ ವರ್ಗಿಯಾ, ಈ ಹಿಂದೆ ತ್ರಿಪುರ ಮತ್ತು ಹರಿಯಾಣದಲ್ಲೂ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಮೊದಲೇ ಘೋಷಿಸದೇ ಚುನಾವಣೆಯನ್ನು ಎದುರಿಸಿ ಗೆಲುವು ದಾಖಲಿಸಿದ್ದೇವೆ ಎಂದು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications