ಹರಿಯಾಣ ಕಾಂಗ್ರೆಸ್ ನಾಯಕ ವಿಕಾಸ್ ಚೌಧರಿ ಮೇಲೆ ಗುಂಡು ಹಾರಿಸಿ ಹತ್ಯೆ
ಫರೀದಾಬಾದ್, ಜೂನ್ 27: ದೆಹಲಿ ಸಮೀಪದ ಫರೀದಾಬಾದ್ ನಲ್ಲಿ ಗುರುವಾರ ಬೆಳಗ್ಗೆ ಹರಿಯಾಣದ ಕಾಂಗ್ರೆಸ್ ನಾಯಕ ವಿಕಾಸ್ ಚೌಧರಿಯನ್ನು (38 ವರ್ಷ ವಯಸ್ಸು) ಅಪರಿಚಿತರು ಗುಂಡಿಟ್ಟು ಕೊಂದಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳ ಪ್ರಕಾರ, ಜಿಮ್ ನಿಂದ ಹೊರಬಂದ ಚೌಧರಿ ಅವರ ಮೇಲೆ ದಾಳಿ ನಡೆದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ.
ಮಾರುತಿ ಸುಜುಕಿ SX4 ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಾಂಗ್ರೆಸ್ ನಾಯಕ ಚೌಧರಿ ಅವರ ಮೇಲೆ ಹತ್ತು ಗುಂಡುಗಳನ್ನು ಹಾರಿಸಿದ್ದಾರೆ. ಸೆಕ್ಟರ್ 9 ಫರೀದಾಬಾದ್ ನಲ್ಲಿ ಈ ಘಟನೆ ನಡೆದಿದೆ. ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಜಂಗಲ್ ರಾಜ್. ಕಾನೂನಿನ ಬಗ್ಗೆ ಯಾರಿಗೂ ಭಯ ಇಲ್ಲ. ಲೈಂಗಿಕ ಹಿಂಸೆ ನೀಡುತ್ತಿದ್ದವರ ವಿರೋಧಿಸಿದ ಕಾರಣಕ್ಕೆ ಗುರುವಾರ ಮಹಿಳೆಗೆ ಇರಿಯಲಾಗಿದೆ. ಸಮಗ್ರವಾದ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಅಶೋಕ್ ತನ್ವರ್ ಆಗ್ರಹ ಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರ ಮೇಲೆ ನಡೆದಿರುವ ಇಂಥ ಕ್ರೂರ ದಾಳಿಯ ಬಗ್ಗೆ ನಮಗೆ ಅಪಾರ ಸಿಟ್ಟು ಹಾಗೂ ದುಃಖ ಇದೆ. ತಪ್ಪಿತಸ್ಥರನ್ನು ಶೀಘ್ರವಾಗಿ ಕಂಡುಹಿಡಿದು, ಅವರಿಗೆ ಶಿಕ್ಷೆ ಆಗುವಂತೆ ಮಾಡಬೇಕು ಎಂದು ಹರಿಯಾಣ ಸರಕಾರವನ್ನು ಆಗ್ರಹಿಸುತ್ತೇವೆ. ಇಂಥ ದುಃಖದ ಸನ್ನಿವೇಶದಲ್ಲಿ ಚೌಧರಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
This morning, @INCHaryana Senior leader #VikasChaudhary Killed by #Goondas in Delhi.
— Nagaraj Poojary ನಾಗರಾಜ್ ಪೂಜಾರಿ (@Adv_Poojary) 27 June 2019
This is horrible,
India under Real Emergency @INCIndia pic.twitter.com/NPPm3ND9lb
ಹರಿಯಾಣ ಕಾಂಗ್ರೆಸ್ ನ ವಕ್ತಾರರಾಗಿದ್ದವರು ವಿಕಾಸ್ ಚೌಧರಿ. ಇತ್ತೀಚೆಗಷ್ಟೇ ಅವರು ಇಂಡಿಯನ್ ನ್ಯಾಷನಲ್ ಲೋಕ್ ದಳ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ ಆಗಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications