ಆರ್ಥಿಕ ಕುಸಿತ: ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇದೆ ಎಂದ ಕೇಜ್ರಿವಾಲ್
Recommended Video
ನವದೆಹಲಿ, ಆಗಸ್ಟ್ 24: ದೇಶದಾದ್ಯಂತ ಆತಂಕ ಮೂಡಿಸಿರುವ ಆರ್ಥಿಕ ಕುಸಿತದ ಸಮಸ್ಯೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂಬ ಸಂಪೂರ್ಣ ನಂಬಿಕೆ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಆರ್ಥಿಕತೆಯನ್ನು ಸರಿದಾರಿಗೆ ತರಲು ಇಡೀ ದೇಶ ಒಂದಾಗಿ ನಿಲ್ಲಬೇಕಾಗಿರುವ ಸಮಯ ಎಂದು ಹೇಳಿದರು.
'ನನಗೆ ಈ ಸಂದರ್ಭದಲ್ಲಿ ಸಂಪೂರ್ಣ ಭರವಸೆ ಇದೆ. ಆರ್ಥಿಕ ಕುಸಿತದ ಬಿಕ್ಕಟ್ಟನ್ನು ಸರಿಪಡಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಈಗ ಇಡೀ ದೇಶ ಒಗ್ಗಟ್ಟಾಗಿ ನಿಂತು ಆರ್ಥಿಕತೆಯನ್ನು ಸರಿಪಡಿಸುವ ಕಾಲ' ಎಂದು ಅಭಿಪ್ರಾಯಪಟ್ಟರು.

'ಆರ್ಥಿಕತೆಯನ್ನು ಸರಿಪಡಿಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲಿ ಅದಕ್ಕೆ ದೆಹಲಿ ಸರ್ಕಾರವು ಸಂಪೂರ್ಣ ಬೆಂಬಲ ನೀಡಲಿದೆ. ಉದ್ಯೋಗ ನಷ್ಟದ ಬಗ್ಗೆ ನಾನು ವೈಯಕ್ತಿಕವಾಗಿ ಆತಂಕಕ್ಕೆ ಒಳಗಾಗಿದ್ದೇನೆ' ಎಂದು ಹೇಳಿದರು.
'ಇದು ಅತ್ಯಂತ ಕಳವಳಕಾರಿ ಸಂಗತಿ. ಅದರಲ್ಲಿಯೂ ಮುಖ್ಯವಾಗಿ ಆಟೊಮೊಬೈಲ್ ಉದ್ಯಮ, ಜವಳಿ, ರಿಯಲ್ ಎಸ್ಟೇಟ್ ಮತ್ತು ಇತರೆ ವಲಯಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿವೆ. ಈ ವಲಯಗಳಲ್ಲಿನ ಆರ್ಥಿಕ ಬಿಕ್ಕಟ್ಟು ತೀವ್ರವಾಗಿವೆ' ಎಂದು ತಿಳಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications