ಕೋವಿಶೀಲ್ಡ್ ಲಸಿಕೆಗಳ ಅಂತರ ತಗ್ಗಿಸಲು ದೆಹಲಿ ಹೈಕೋರ್ಟ್ ನಕಾರ
ನವದೆಹಲಿ, ಜುಲೈ 15: ಕೋವಿಶೀಲ್ಡ್ ಲಸಿಕೆಗಳ ನಡುವಿನ ಅಂತರ ತಗ್ಗಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. 50 ವರ್ಷದ ಮೇಲ್ಪಟ್ಟವರು ಹಾಗೂ ಬಹು ರೀತಿಯ ಆರೋಗ್ಯ ಸಮಸ್ಯೆಯನ್ನು ಹೊಂದಿರುವವರಿಗೆ ಕೋವಿಶೀಲ್ಡ್ನ ಡೋಸೇಜ್ ಅಂತರವನ್ನು 12-16 ರಿಂದ 8 ವಾರಗಳಿಗೆ ತಗ್ಗಿಸಲು ನಿರ್ದೇಶನ ನೀಡಬೇಕೆಂದು ಡಾ.ಸಿದ್ಧಾರ್ಥ್ ಡೆ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ಜು.15 ರಂದು ನಡೆಸಿದೆ ಕೋರ್ಟ್ ಈ ಸಂಬಂಧ ನೋಟಿಸ್ ಜಾರಿ ಮಾಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ಶುಲ್ಕ (ದಂಡ) ಸಹಿತ ವಜಾಗೊಳಿಸಿದೆ.
ಇದು ಪ್ರಮಾಣಿಕವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಜೌಹರಿ ಹೇಳಿದರು, ಇದು ಪ್ರಮಾಣಿಕ ಪಿಐಎಲ್ ಎಂಬ ಬಗ್ಗೆ ಅನುಮಾನವಿಲ್ಲ. ಅರ್ಜಿ ವಜಾಗೊಳಿಸುವುದು ಅಪ್ರಾಮಾಣಿಕತೆಯ ಪ್ರಮಾಣಪತ್ರವೂ ಅಲ್ಲ ಎಂದು ಕೋರ್ಟ್ ಹೇಳಿದೆ. ಜೌಹರಿ ತಮ್ಮ ಅರ್ಜಿಯನ್ನು ಬೇಷರತ್ ಆಗಿ ಹಿಂಪಡೆದಿದ್ದಾರೆ.
ಕೋವಿಶೀಲ್ಡ್ ನ ಎರಡು ಡೋಸ್ ಗಳ ಅಂತರವನ್ನು ಈಗ 12-16 ವಾರಗಳಿಗೆ ನಿಗದಿಪಡಿಸಲಾಗಿದೆ. ಕೋವಿಶೀಲ್ಡ್ ಡೋಸೇಜ್ ಅಂತರವನ್ನು ತಗ್ಗಿಸುವುದಕ್ಕೆ ನಿರ್ದೇಶನ ನೀಡಲು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಡೋಸೇಜ್ ಗಳ ಅಂತರವನ್ನು ನಿಗದಿಪಡಿಸುವ ವಿಧಾನದ ಬಗ್ಗೆ ನಿಮಗೆ ಅರಿವಿದೆಯೇ? ಡೋಸೇಜ್ ಗಳನ್ನು ಯಾರು ನಿಗದಿಪಡಿಸುತ್ತಿದ್ದಾರೆ? ನಮಗೆ ಆ ಅಧಿಕಾರವಿದ್ದರೆ ವಿಧಾನವನ್ನೇ ಬದಲಾವಣೆ ಮಾಡಬೇಕಾಗುತ್ತದೆ ಎಂದು ಸಿದ್ಧಾರ್ಥ್ ಅವರ ಪರ ವಾದ ಮಂಡಿಸಿದ ವಕೀಲ ಕುಲ್ದೀಪ್ ಜೌಹರಿ ಅವರಿಗೆ ನ್ಯಾ.ಡಿ.ಎನ್ ಪಟೇಲ್, ನ್ಯಾ. ಜ್ಯೋತಿ ಸಿಂಗ್ ಅವರಿದ್ದ ಪೀಠ ಹೇಳಿದೆ.
ಜೌಹರಿ ಅವರು ಮಂಡಿಸಿರುವ ವಾದ ಡೋಸೇಜ್ ಅಂತರ ತಗ್ಗಿಸುವ ವಿಚಾರದಲ್ಲಿ ಕೋರ್ಟ್ ಗೆ ಸ್ಪಷ್ಟವಾಗಿ ಮನವರಿಕೆಯಾಗಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಕೇವಲ ವಾದ ಮಾಡುವುದಕ್ಕಾಗಿಯಷ್ಟೇ ವಾದಿಸುತ್ತಿದ್ದೀರಿ, ನಮಗೆ ಮನವರಿಕೆಯಾಗಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಕೋವಿಡ್-19 ಕಾರ್ಯನಿರತ ಗುಂಪು ಹಾಗೂ ತಜ್ಞ ಗುಂಪುಗಳು ಈ ಅಂಶದ ಬಗ್ಗೆ ಗಮನ ಹರಿಸಿದೆ ಎಂದು ಹೇಳಿದ್ದು, ತಮ್ಮ ವಾದದ ಸಮರ್ಥನೆಗೆ ಬ್ರಿಟನ್ ವಿಜ್ಞಾನಿಗಳ ಅಧ್ಯಯನವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.
ಬ್ರಿಟನ್ ನ ವಿಜ್ಞಾನಿಗಳು ನಡೆಸಿರುವ ಅಧ್ಯಯನದ ಪ್ರಕಾರ ಕೋವಿಡ್-19 ನ ಹೊಸ ರೂಪಾಂತರಿಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಡೋಸೇಜ್ ಅಂತರವನ್ನು ಕಡಿಮೆ ಮಾಡುವ ಅಗತ್ಯವಿದೆ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications