ಅಫ್ಘಾನ್ ಶಾಂತಿ ಮಂತ್ರಕ್ಕೆ ಬೆಂಬಲದ ಭರವಸೆ ನೀಡಿದ ಪ್ರಧಾನಿ ಮೋದಿ
ನವದೆಹಲಿ, ಅಕ್ಟೋಬರ್ 08: ಅಫ್ಘಾನಿಸ್ತಾನದಲ್ಲಿ ಶಾಂತಿ ಸೂತ್ರಕ್ಕೆ ಭಾರತದ ನಿರಂತರ ಬೆಂಬಲವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಫ್ಘಾನಿಸ್ತಾನ ಶಾಂತಿ ಸಮಾಲೋಚನಾ ಸಭೆಯಲ್ಲಿ ಅಬ್ದುಲ್ಲಾ ಅಬ್ದುಲ್ಲಾ ಅವರಿಗೆ ಭರವಸೆ ನೀಡಿದರು.
ಅಫ್ಘಾನಿಸ್ತಾನದ ರಾಷ್ಟ್ರೀಯ ಸಾಮರಸ್ಯದ ಉನ್ನತ ಮಂಡಳಿಯ ಅಧ್ಯಕ್ಷರಾದ ಅಬ್ದುಲ್ಲಾ ಅವರು ಮೋದಿಯನ್ನು ಭೇಟಿಯಾಗಿ, ಶಾಂತಿ ಪ್ರಕ್ರಿಯೆ ಮತ್ತು ಪ್ರಸ್ತುತ ಕತಾರ್ನ ದೋಹಾದಲ್ಲಿ ಅಫ್ಘಾನ್ ಸರ್ಕಾರ ಮತ್ತು ತಾಲಿಬಾನ್ ನಡೆಸುತ್ತಿರುವ ಮಾತುಕತೆಗಳ ಬಗ್ಗೆ ತಿಳಿಸಿದರು.
ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಸಂತೋಷವಾಯಿತು, ನಮ್ಮ ಭೇಟಿಯಲ್ಲಿ ಶಾಂತಿ ಪ್ರಕ್ರಿಯೆ, ದೋಹಾದ ಮಾತುಕತೆ ಮತ್ತು ಶಾಂತಿ ಪ್ರಯತ್ನಗಳಿಗೆ ಭಾರತದ ಬೆಂಬಲ, ಇತ್ತೀಚಿನ ಬೆಳವಣಿಗೆಗಳ ಕುರಿತು ಮಾತನಾಡಿದೆವು ಎಂದು ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನಕ್ಕೆ ಭಾರತದ ನಿರಂತರ ಬೆಂಬಲ ಇರುವುದಾಗಿ ಮೋದಿ ಭರವಸೆ ನೀಡಿದ್ದಾರೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ದೋಹಾದಲ್ಲಿ ಮಾತುಕತೆಗಳಿಗೆ ಬೆಂಬಲ ಕೋರಿ ಐದು ದಿನಗಳ ಭೇಟಿಗಾಗಿ ಅಬ್ದುಲ್ಲಾ ಭಾರತಕ್ಕೆ ಆಗಮಿಸಿದ್ದರು. ಇಸ್ಲಾಮಾಬಾದ್ನಲ್ಲಿ ಮೂರು ದಿನಗಳು ಇದ್ದು ಬಳಿಕ ದೆಹಲಿಗೆ ಭೇಟಿ ನೀಡಿದ್ದರು.
ಅವರು ಇನ್ಸ್ಟಿಟ್ಯೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಆಂಡ್ ಅನಾಲಿಸಿಸ್ನಲ್ಲಿ ಭಾಷಣ ಮಾಡಲಿದ್ದಾರೆ. ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಅವರು ಭಾರತಕ್ಕೆ ಬರುವ ಮುನ್ನ'ಭಾರತವು ಅಫ್ಘಾನಿಸ್ತಾನದ ಕಾರ್ಯತಂತ್ರದ ಪಾಲುದಾರ' ಎಂದು ಹೇಳಿಕೆಯಲ್ಲಿ ತಿಳಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications