ಸೈಕಲ್ ಏರಿ ಬಂದು ಅಧಿಕಾರ ಸ್ವೀಕರಿಸಿದ ಆರೋಗ್ಯ ಸಚಿವ
ನವದೆಹಲಿ, ಜೂನ್ 3: ಇಂದು ವಿಶ್ವ ಬೈಸಿಕಲ್ ದಿನ. ಸೈಕಲ್ ಓಡಿಸುವುದು ದೇಹಕ್ಕೂ ಆರೋಗ್ಯಕರ, ಪರಿಸರಕ್ಕೂ ಹಿತ ಎನ್ನುವುದು ಸಾಮಾನ್ಯ ಅಭಿಪ್ರಾಯ. ಕೇಂದ್ರದಲ್ಲಿ ಸತತ ಎರಡನೆಯ ಬಾರಿಗೆ ಆರೋಗ್ಯ ಸಚಿವರಾಗಿ ನೇಮಕವಾಗಿರುವ ಡಾ. ಆರ್. ಹರ್ಷವರ್ಧನ್ ಅಧಿಕಾರ ಸ್ವೀಕರಿಸಲು ಸೋಮವಾರ ಸೈಕಲ್ನಲ್ಲಿ ಬಂದು ಗಮನ ಸೆಳೆದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಹರ್ಷವರ್ಧನ್ ಅವರು ಫಾರ್ಮಲ್ಸ್ ಉಡುಗೆ ತೊಟ್ಟು ಸೈಕಲ್ ತುಳಿದುಕೊಂಡು ಬರುವ ಚಿತ್ರ ವೈರಲ್ ಆಗಿದೆ.
ವಿಶ್ವ ಬೈಸಿಕಲ್ ದಿನದ ಅಂಗವಾಗಿ ಜಾಗೃತಿ ಮೂಡಿಸುವ ಸಲುವಾಗಿ ಹರ್ಷವರ್ಧನ್ ಅವರು ಈ ನಡೆ ಅನುಸರಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೈಕ್ಲಿಂಗ್ ತಮ್ಮ ಅಚ್ಚುಮೆಚ್ಚಿನ ಕ್ರೀಡೆ ಎಂದು ಅವರು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎರಡನೆಯ ಅವಧಿಗೆ ಚುನಾಯಿತರಾದ ಬಳಿಕ ಹರ್ಷವರ್ಧನ್ ಎರಡನೆಯ ಅವಧಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ನೇಮಕವಾಗಿದ್ದಾರೆ. ಸೋಮವಾರ ಅವರು ಅಧಿಕಾರ ಸ್ವೀಕರಿಸಿದರು. ಕಳೆದ ಸಾಲಿನಲ್ಲಿ ಕೂಡ ಆರೋಗ್ಯ ಸಚಿವರಾಗಿದ್ದ ಅವರು, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಯನ್ನು ಕೂಡ ಹೆಚ್ಚುವರಿಯಾಗಿ ನಿಭಾಯಿಸಿದ್ದರು.
|
ಮೋದಿ ಅವರಿಗೆ ಕೃತಜ್ಞ
'ಇಂದು ನಾನು ಆರೋಗ್ಯ ಮತ್ತು ಕುಟುಂಬ ಸಚಿವನಾಗಿ ಅಧಿಕಾರ ಸ್ವೀಕರಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇರಿಸಿರುವುದಕ್ಕೆ ಪ್ರಧಾನಿ ಮೋದಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ. ಮೋದಿ ಸರ್ಕಾರದ ಮೊದಲ ಆದ್ಯತೆ ದೇಶದ ಜನರ ಆರೋಗ್ಯ. ಸಚಿವನಾಗಿ ನನ್ನ ಮೇಲಿರುವ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿಭಾಯಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
| Array |
ಸೈಕ್ಲಿಂಗ್ ನೆಚ್ಚಿನ ಕ್ರೀಡೆ
ಸೈಕ್ಲಿಂಗ್ ಒಂದು ಸರಳ, ಕಡಿಮೆ ವೆಚ್ಚದ, ನಂಬಿಕಸ್ಥ, ಶುದ್ಧ ಹಾಗೂ ಸಾರಿಗೆಯಲ್ಲಿ ಪರಿಸರೀಯವಾಗಿ ಸುಸ್ಥಿರ. ಜೂನ್ 3ಅನ್ನು ವಿಶ್ವ ಬೈಸಿಕಲ್ ದಿನ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದೆ. ಸುಸ್ಥಿರ ಅಭಿವೃದ್ಧಿ ಗುರಿಗಾಗಿ ಸೈಕ್ಲಿಂಗ್ನ ಮಹತ್ವವನ್ನು ಒತ್ತಿ ಹೇಳಲು ಈ ದಿನವನ್ನು ಆಚರಿಸಲಾಗುತ್ತಿದೆ. ಇದು ನನ್ನ ನೆಚ್ಚಿನ ಕ್ರೀಡೆ ಕೂಡ ಎಂದು ಅವರು ಹೇಳಿದ್ದಾರೆ.

ಎರಡೆರಡು ಹೊಣೆಗಾರಿಕೆ
ಮೋದಿ ಅವರ ಎರಡನೆಯ ಅವಧಿಯ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಸಚಿವರಾಗಿರುವ ಜತೆಗೆ ಕಳೆದ ಸಾಲಿನಲ್ಲಿ ನಿಭಾಯಿಸಿದ್ದ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಭೂ ವಿಜ್ಞಾನಗಳ ಸಚಿವ ಸ್ಥಾನದಲ್ಲಿ ಕೂಡ ಹರ್ಷವರ್ಧನ್ ಮುಂದುವರಿಯಲಿದ್ದಾರೆ. 2017ರಲ್ಲಿ ಅನಿಲ್ ಮಾಧವ್ ದುಬೆ ಅವರ ಅಕಾಲಿಕ ಮರಣದಿಂದ ತೆರವಾಗಿದ್ದ ಪರಿಸರ ಮತ್ತು ಅರಣ್ಯ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ಅವರು ವಹಿಸಿಕೊಂಡಿದ್ದರು.

ಇಎನ್ಟಿ ತಜ್ಞ ಹರ್ಷವರ್ಧನ್
64 ವರ್ಷದ ಹರ್ಷವರ್ಧನ್, ದೆಹಲಿಯ ಚಾಂದಿನಿ ಚೌಕ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಾನ್ಪುರ ಜಿಎಸ್ವಿಎಂ ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಹಾಗೂ ಎಂಎಸ್ ಪದವಿ ಪಡೆದಿರುವ ಅವರು ಇಎನ್ಟಿ ತಜ್ಞರೂ ಹೌದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications