"ಲಸಿಕೆ ಹಾಕುವ ಬದಲು ಲಸಿಕೆ ಬಗ್ಗೆ ಅನುಮಾನ ಹುಟ್ಟುಹಾಕಿರುವುದು ನೀವೇ"
ನವದೆಹಲಿ, ಏಪ್ರಿಲ್ 19: ಕೊರೊನಾ ನಿರ್ವಹಣೆ ಕುರಿತು ಸರ್ಕಾರದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರ ಪತ್ರಕ್ಕೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿರುಗೇಟು ನೀಡಿದ್ದಾರೆ.
ದೇಶದಲ್ಲಿ ಕೊರೊನಾ ಎರಡನೇ ಅಲೆ ಕಾಂಗ್ರೆಸ್ ಆಡಳಿತದ ರಾಜ್ಯಗಳಿಂದ ಪ್ರಚೋದನೆ ಪಡೆದುಕೊಂಡಿದೆ. ಜನರಿಗೆ ಲಸಿಕೆ ಹಾಕುವುದರ ಬದಲು ಲಸಿಕೆಗಳ ಕುರಿತು ಅನುಮಾನ ಹುಟ್ಟುಹಾಕುವಲ್ಲಿ ಕಾಂಗ್ರೆಸ್ ನಿರತವಾಗಿದೆ ಎಂದು ದೂರಿದರು.
ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಮುಖವಾಗಿರುವ ಲಸಿಕಾ ಮಹತ್ವವನ್ನು ಸಿಂಗ್ ಅರ್ಥ ಮಾಡಿಕೊಂಡಿದ್ದರೂ ಕೆಲವು ಕಾಂಗ್ರೆಸ್ ನಾಯಕರು ನೀಡಿದ ಬೇಜವಾಬ್ದಾರಿ ಹೇಳಿಕೆಗಳಿಂದ ರಾಷ್ಟ್ರೀಯ ಸರಾಸರಿ ಲಸಿಕಾ ಕಾರ್ಯಕ್ರಮಕ್ಕೆ ಅಡ್ಡಿಯಾಗಿದೆ. ಹಿರಿಯ ನಾಗರಿಕರು ಹಾಗೂ ಕೊರೊನಾ ವಿರುದ್ಧದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವಲ್ಲಿಯೂ ಕಾಂಗ್ರೆಸ್ ಆಡಳಿತದ ಸರ್ಕಾರಗಳು ಹಿಂದುಳಿದಿವೆ ಎಂದು ದೂರಿದರು.

ಸಿಂಗ್ ಅವರು ಬರೆದ ಪತ್ರವನ್ನು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದು, "ನಿಮ್ಮ ಈ ಸಹಕಾರ ಹಾಗೂ ಅಮೂಲ್ಯವಾದ ಸಲಹೆಯನ್ನು ನಿಮ್ಮ ಕಾಂಗ್ರೆಸ್ ನಾಯಕರೂ ಅನುಸರಿಸಿದರೆ ಒಳ್ಳೆಯದು" ಎಂದು ಹೇಳಿದ್ದಾರೆ.
ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಮನಮೋಹನ್ ಸಿಂಗ್, "ಲಸಿಕಾ ಕಾರ್ಯಕ್ರಮಕ್ಕೆ ಇನ್ನಷ್ಟು ವೇಗ ತುಂಬಬೇಕು. ಇದಷ್ಟೇ ಕೊರೊನಾ ಪಿಡುಗಿನ ನಿಯಂತ್ರಣಕ್ಕೆ ಇರುವ ದಾರಿ. ಸರ್ಕಾರ ಇಂತಿಷ್ಟು ಮಂದಿಗೆ ಲಸಿಕೆ ನೀಡಿದ್ದೇವೆ ಎಂದು ಸಂಖ್ಯೆ ಹೇಳುವುದಕ್ಕಿಂತ ಶೇಕಡಾವಾರು ಪ್ರಮಾಣವನ್ನು ಗಣನೆಗೆ ತೆಗೆದುಕೊಳ್ಳಬೇಕು" ಎಂದು ಹೇಳಿದ್ದರು.
-
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ












Click it and Unblock the Notifications