ಭಾರತದ ಕಂಟೇನ್ಮೆಂಟ್ ಝೋನ್ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿ
ನವದೆಹಲಿ, ಡಿಸೆಂಬರ್.01: ಭಾರತದಲ್ಲಿ ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಿರುವ ಪ್ರದೇಶಗಳಲ್ಲಿರುವ ಎಲ್ಲ ಮಾರುಕಟ್ಟೆಗಳನ್ನು ಮುಚ್ಚುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆದೇಶಿಸಿದೆ.
ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ಮಾರುಕಟ್ಟೆ ಪ್ರದೇಶಗಳಲ್ಲಿ ಏನೆಲ್ಲ ನಿಯಮಗಳನ್ನು ಪಾಲಿಸಬೇಕು ಎನ್ನುವುದರ ಕುರಿತು ಮತ್ತೊಂದು ಮಾರ್ಗಸೂಚಿಯನ್ನು ಹೊರಡಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ, ಕಂಟೇನ್ಮೆಂಟ್ ಝೋನ್ ಗಳಲ್ಲಿರುವ ಮಾರುಕಟ್ಟೆಗಳನ್ನು ಮುಚ್ಚಬೇಕು. ಕಂಟೇನ್ಮೆಂಟ್ ಝೋನ್ ನಿಂದ ಹೊರಪ್ರದೇಶಗಳಲ್ಲಿ ಮಾತ್ರ ಮಾರುಕಟ್ಟೆಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗಿದೆ.

ಆರೋಗ್ಯ ಸಚಿವಾಲಯದ ಎಚ್ಚರಿಕೆ:
ದೇಶದಲ್ಲಿ ಕೊವಿಡ್-19 ಸೋಂಕು ನಿಯಂತ್ರಿಸುವುದಕ್ಕೆ ಜನರು ಜಾಗೃತಿ ವಹಿಸಬೇಕು. 65 ವರ್ಷದ ಮೇಲ್ಮಟ್ಟ ವೃದ್ಧರು, ಆರೋಗ್ಯ ಸಮಸ್ಯೆ ಉಳ್ಳವರು, ಗರ್ಭಿಣಿಯರು, 10 ವರ್ಷದೊಳಗಿನ ಮಕ್ಕಳು ಅನಗತ್ಯವಾಗಿ ಸಂಚರಿಸುವುದು ಸೂಕ್ತವಲ್ಲ. ಮೂಲಭೂತ ಸೌಕರ್ಯಗಳಿಗೆ ಮಾತ್ರ ಹೊರಗೆ ಬರಬೇಕು. ಉಳಿದ ಸಮಯದಲ್ಲಿ ಸಾಧ್ಯವಾದಷ್ಟು ಮನೆಗಳಲ್ಲಿಯೇ ಇರವುದು ಉತ್ತಮ ಎಂದು ಎಚ್ಚರಿಸಿದೆ.
ಮಾರುಕಟ್ಟೆಗಳಲ್ಲಿ ಅಂಗಡಿ ಇಟ್ಟುಕೊಂಡಿರುವ ವ್ಯಾಪಾರಿಗಳಿಗೆ ಕೊವಿಡ್-19 ಸೋಂಕಿನಿಂದ ಹೆಚ್ಚು ಅಪಾಯವಿರುತ್ತದೆ. ಈ ಹಿನ್ನೆಲೆ ವ್ಯಾಪಾರಿಗಳು ಹೆಚ್ಚುವರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾರ್ವಜನಿಕರಿಂದ ನೇರ ಸಂಪರ್ಕ ಹೊಂದುವುದನ್ನು ಸಾಧ್ಯವಾದಷ್ಟು ಕಡಿತಗೊಳಿಸಬೇಕು ಎಂದು ಸೂಚಿಸಲಾಗಿದೆ.
ಕಂಟೇನ್ಮೆಂಟ್ ಝೋನ್ ನಲ್ಲಿರುವ ಮಾರುಕಟ್ಟೆಗಳ ಮಾಲೀಕರ ಸಂಘವು ಈ ನಿಯಮಾವಳಿಗಳು ಜಾರಿಯಾಗುವಂತೆ ನೋಡಿಕೊಳ್ಳಬೇಕು. ಹೊಸ ನಿಯಮಗಳು ಪಾಲನೆಯಾಗುತ್ತಿರುವ ಬಗ್ಗೆ ನಿಗಾ ವಹಿಸುವುದಕ್ಕೆ ಉಪ ಸಮಿತಿಯೊಂದನ್ನು ರಚಿಸಬೇಕು. ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಕೆ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸೂಚಿಸಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications