Heatwave : ತಾಪಮಾನದಿಂದ ತತ್ತರಿಸಿರುವ ಉತ್ತರ ಭಾರತದ ರಾಜ್ಯಗಳಲ್ಲಿ ಮುಂದಿನ ವಾರ ಮಳೆ ಸಾಧ್ಯತೆ
ನವದೆಹಲಿ, ಏಪ್ರಿಲ್ 29 : ಗರಿಷ್ಠ ತಾಪಮಾನನಿಂದ ತತ್ತರಿಸಿರುವ ಉತ್ತರ ಭಾರತದ ಹಲವು ರಾಜ್ಯಗಳಿಗೆ ಕೊಂಚ ರಿಲೀಫ್ ಸಿಗಲಿದ್ದು, ಮುಂದಿನ ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 4 ರಿಂದ 7ರವರೆಗೆ ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದೆಹಲಿಯ ಸಫ್ದರ್ ಜಂಗ್ನಲ್ಲಿ ಬುಧವಾರ ಒಂದೇ ದಿನ 43.5 ಡಿಗ್ರಿ ಸೆಲ್ಸಿಯಸ್ ಗರಿಷ್ಟ ತಾಪಮಾನವನ್ನು ದಾಖಲಿಸಿದ್ದು, ಇದು 12 ವರ್ಷಗಳ ನಂತರ ಏಪ್ರಿಲ್ ತಿಂಗಳಲ್ಲಿ ದಾಖಲಾದ ಗರಿಷ್ಟ ತಾಪಮಾನವಾಗಿದೆ. ಇದರ ಜೊತೆಗೆ ರಿಡ್ಜ್ ಪ್ರದೇಶದಲ್ಲಿ 45.1 ಡಿಗ್ರಿ ಸೆಲ್ಸಿಯಸ್, ಮುಂಗೇಶ್ಪುರ 45.8 ಡಿಗ್ರಿ ಸೆಲ್ಸಿಯಸ್, ನಜಾಫ್ಗಢ 45.4 ಡಿಗ್ರಿ ಸೆಲ್ಸಿಯಸ್ ಮತ್ತು ಪಿತಾಂಪುರದಲ್ಲಿ 45.2 ಡಿಗ್ರಿ ಸೆಲ್ಸಿಯಸ್ನಷ್ಟು ಗರಿಷ್ಟ ತಾಪಮಾನ ದಾಖಲಾಗಿದೆ.
ರಾಜಸ್ಥಾನದ ಚುರು, ಬಾರ್ಮರ್, ಬಿಕಾನೇರ್ ಮತ್ತು ಶ್ರೀಗಂಗಾನಗರ ಸ್ಥಳಗಳಲ್ಲಿ 45 ಡಿಗ್ರಿ ಸೆಲ್ಸಿಯಸ್ ಗರಿಷ್ಟ ತಾಪಮಾನ ದಾಖಲಾಗಿದ್ದು, ಬಿಸಿಗಾಳಿ ಹೆಚ್ಚಾಗಿದೆ. ಹೀಗಾಗಿ ಹವಮಾನ ಇಲಾಖೆ ರಾಜಸ್ಥಾನಕ್ಕೆ ಅರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಶುಕ್ರವಾರ ಕೂಡ ನಗರದಲ್ಲಿ ಬಿಸಿಗಾಳಿ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚನೆ ನೀಡಿದೆ.

ಸದ್ಯಕ್ಕೆ ದೆಹಲಿಯಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆ ಇದೆ, ಈ ಮೂಲಕ ಬಿಸಿಲ ಬೇಗೆಗೆ ಕೆಂಡದಂತಾಗಿರುವ ಭೂಮಿಗೆ ವರುಣ ತಂಪರೆಯಲಿದ್ದು, ಜನರಿಗೂ ಕೂಡ ಬಿಸಿಗಾಳಿಯಿಂದ ಕೊಂಚ ರಿಲೀಫ್ ಸಿಗುವ ಸಾಧ್ಯತೆ ಇದೆ. ಆದ್ರೆ ಅಲ್ಲಿಯವರೆಗೂ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಬಿಸಿಗಾಳಿ ಪ್ರಮಾಣ ಹೆಚ್ಚಿರಲಿದ್ದು, ಅದರಲ್ಲೂ ಪ್ರಮುಖವಾಗಿ ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಹೆಚ್ಚಾಗಿ ಬಿಸಿಗಾಳಿ ವಾತವರಣ ಇರಲಿದೆ. ಈಗಾಗಲೇ ಹವಮಾನ ಇಲಾಖೆ ಕೂಡ ಉತ್ತರ ಭಾರತದ 5 ರಾಜ್ಯಗಳಿಗೆ ಅರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಸದ್ಯ ಈ ತಾಪಮಾನ ಹೆಚ್ಚಳದ ನಡುವೆಯೂ ಉತ್ತರ ಭಾರತದ ರಾಜ್ಯಗಳಲ್ಲಿ ಮುಂದಿನ ವಾರ ಮಳೆಯಾಗುವುದರಿಂದ ವಾತಾವರಣ ತಂಪಿನಿಂದ ಇರುವ ಸಾಧ್ಯತೆ ಇದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications