ದೆಹಲಿ, ಗುರ್ ಗಾಂವ್ ನಲ್ಲಿ ಭಾರೀ ಮಳೆ, ಕರ್ನಾಟಕದ ಕರಾವಳಿಯಲ್ಲಿ ಎಚ್ಚರ
Recommended Video

ನವದೆಹಲಿ, ಆಗಸ್ಟ್ 28: ದೆಹಲಿ ಹಾಗೂ ಗುರ್ ಗಾಂವ್ ನಲ್ಲಿ ಮಂಗಳವಾರ ಭಾರಿ ಮಳೆಯಾಗಿ, ಪ್ರವಾಹ ಪರಿಸ್ಥಿತಿ ಏರ್ಪಟ್ಟಿತು. ಇದರಿಂದ ಸಂಚಾರ ದಟ್ಟಣೆಯಾಗಿ ರಸ್ತೆಯುದ್ದಕ್ಕೂ ವಾಹನಗಳು ಸಾಲಾಗಿ ನಿಂತವು. ಶಾಲೆಗೆ ತೆರಳುವ ಮಕ್ಕಳು ಹಾಗೂ ಅವರ ಪೋಷಕರು ಗಂಟೆಗಟ್ಟಲೆ ರಸ್ತೆಯಲ್ಲೇ ನಿಲ್ಲಬೇಕಾಯಿತು. ಮುಂದೆ ಸಾಗಲಾರದೆ ಕೆಲವರು ಮನೆಗಳಿಗೆ ಹಿಂತಿರುಗಿದರು.
ಸಂಚಾರ ದಟ್ಟಣೆ ಬಗ್ಗೆ ದೆಹಲಿ ಸಂಚಾರ ಪೊಲೀಸರು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿದರು. ಸಾಲುಗಟ್ಟಿ ನಿಂತಿದ್ದ ಕಾರು-ಬೈಕ್ ಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು. ದೆಹಲಿ-ಜೈಪುರ್-ಮುಂಬೈ ಹೆದ್ದಾರಿ ಮಾರ್ಗದಲ್ಲೂ ಸಂಚಾರಕ್ಕೆ ಸಮಸ್ಯೆಯಾಯಿತು. "ಸಂಚಾರ ವ್ಯವಸ್ಥೆ ಸುಗಮ ಮಾಡಲು ನಮ್ಮ ತಂಡ ಶ್ರಮಿಸುತ್ತಿದೆ" ಎಂದು ಗುರ್ ಗಾಂವ್ ಅ ಎಸಿಪಿ ಹೀರಾ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣ, ಕೇಂದ್ರ ದೆಹಲಿ, ಆರ್.ಕೆ.ಪುರಂನಲ್ಲಿ ಮಂಗಳವಾರ ಬೆಳಗ್ಗೆ ಗುಡುಗು-ಮಿಂಚು ಸಹಿತ ಮಳೆಯಾದ ಬಗ್ಗೆ ವರದಿಯಾಗಿದೆ. ಮರಗಳು ಉರುಳಿ, ವಿದ್ಯುತ್ ಸಂಪರ್ಕ ಕಡಿತವಾಗಿ, ಕೆಲವೆಡೆ ಮನೆಗಳಿಗೆ ನೀರು ನುಗ್ಗಿರುವ ಬಗ್ಗೆ ಕೂಡ ಸಾರ್ವಜನಿಕರು ದೂರು ನೀಡಿದ್ದಾರೆ. ನೋಯಿಡಾ ಹಾಗೂ ಘಾಜಿಯಾಬಾದ್ ನ ನಿವಾಸಿಗಳು ಕೂಡ ಮಳೆಯ ಕಾರಣಕ್ಕೆ ಬೆಳಗಿನ ಜಾವ ನಿದ್ದೆಯಿಂದ ಎಚ್ಚರವಾಗಿದ್ದಾರೆ.

ಕಳೆದ ಮೂರು ವರ್ಷಗಳ ಆಗಸ್ಟ್ ತಿಂಗಳಲ್ಲೇ ಈ ಬಾರಿಯೇ ಅತಿ ಹೆಚ್ಚು ಮಳೆಯಾಗಿದೆ. ಗುರುವಾರದ ತನಕ ಇದೇ ರೀತಿ ಮಳೆ ಆಗಬಹುದು ಎಂಬ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.

ಉತ್ತರಾಖಂಡ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರಪ್ರದೇಶ, ಪೂರ್ವ ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಢ, ಮಹಾರಾಷ್ಟ್ರದ ವಿದರ್ಭ ಭಾಗ, ಹಿಮಾಲಯ ಭಾಗದ ಪಶ್ಚಿಮ ಬಂಗಾಲ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ್, ಮಿಜೋರಾಂ, ತ್ರಿಪುರಾ, ಕೊಂಕಣ ಕರಾವಳಿ, ಗೋವಾ, ತೆಲಂಗಾಣ ಮತ್ತು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆ ಆಗುವ ಬಗ್ಗೆ ಎಚ್ಚರಿಕೆ ನೀಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications