ದೇಶದಾದ್ಯಂತ ಭಯೋತ್ಪಾದಕ ದಾಳಿ ಸಂಭವ: ಗುಪ್ತಚರ ಇಲಾಖೆಯಿಂದ ಕಟ್ಟೆಚ್ಚರ
ನವದೆಹಲಿ, ಜೂನ್ 20: ದೇಶದ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆಯುವ ಸಂಭವವಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖ ಸಿಟಿಗಳ ಜನಜಂಗುಳಿ ಇರುವ ಪ್ರದೇಶಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ದೆಹಲಿ ಪೊಲೀಸರು ದೇಶದ ಎಲ್ಲಾ ಭದ್ರತಾ ದಳಗಳಿಗೂ ಸೂಚನೆ ನೀಡಿದ್ದು, ಬಸ್ ಸ್ಟೇಶನ್, ರೈಲ್ವೇ ಸ್ಟೇಶನ್, ಮೆಟ್ರೋ ಸ್ಟೇಶನ್, ಏರ್ ಪೋರ್ಟ್, ಸ್ಟೇಡಿಯಂ, ಮಾಲ್, ಪ್ರವಾಸೀ ತಾಣಗಳ ಮೇಲೆ ಕಣ್ಣಿಡುವಂತೆ ತಿಳಿಸಲಾಗಿದೆ.

ಅಷ್ಟೇ ಅಲ್ಲದೆ, ಅಂತರರಾಜ್ಯ ಗಡಿಗಳಲ್ಲಿ ತೆರಳುವ ವಾಹನಗನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡುವಂತೆ ಆದೇಶಿಸಲಾಗಿದೆ.
ಭಯೋತ್ಪಾದಕರ ಗುರಿ ಕೇವಲ ದೆಹಲಿಯಷ್ಟೇ ಅಲ್ಲ, ಭಾರತದ ಇನ್ನುಳಿದ ಎಲ್ಲಾ ಪ್ರಮುಖ ನಗರಗಳ ಮೇಲೂ ಭಯೋತ್ಪಾದಕ ದಾಳಿ ನಡೆಯುವ ಸಂಭವವಿದೆ ಎಂಬ ಮಾಹಿತಿ ಲಂಬಿಸಿರುವ ಹಿನ್ನೆಲೆಯಲ್ಲಿ ಈ ಕಟ್ಟೆಚ್ಚರ ಘೋಷಿಸಲಾಗಿದೆ.












Click it and Unblock the Notifications