ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
ನವದೆಹಲಿ, ಏಪ್ರಿಲ್ 18: ಕೊರೊನಾ ಸೋಂಕಿನಿಂದ ಅತಿ ಹೆಚ್ಚು ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಸಿಕೆಯನ್ನು ವಿತರಿಸಲಾಗುವುದು ಎಂದು ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಕೊರೊನಾ ಸೋಂಕು ದೇಶದಲ್ಲಿ ತೀವ್ರವಾಗಿ ಏರಿಕೆಯಾಗುತ್ತಿದೆ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಪಶ್ಚಿಮ ಬಂಗಾಳ, ದೆಹಲಿ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶದಲ್ಲಿನ ಪರಿಸ್ಥಿತಿ ಕುರಿತು ಸರ್ಕಾರ ಪರಾಮರ್ಶೆ ನಡೆಸಿದೆ.
ಸರ್ಕಾರದ ಬಳಿ ಈಗ 1.50 ಕೋಟಿ ಡೋಸ್ ಲಸಿಕೆಗಳು ಲಭ್ಯವಿದೆ, ಇನ್ನೂ 1.7 ಕೋಟಿ ಡೋಸ್ ಲಸಿಕೆಗಳನ್ನು ಮುಂದಿನ ವಾರದೊಳಗೆ ನೀಡಲಾಗುವುದು. ಪ್ರತಿ ಸಣ್ಣ ರಾಜ್ಯಗಳಿಗೂ ಅವುಗಳ ಪಾಲನ್ನು 7 ದಿನಗಳಿಗೆ ಒಂದು ಬಾರಿಯಂತೆ ಕಳುಹಿಸಿಕೊಡಲಾಗುತ್ತದೆ, ದೊಡ್ಡ ರಾಜ್ಯಗಳಿಗೆ ನಾಲ್ಕು ದಿನಗಳಿಗೊಮ್ಮೆ ಕಳುಹಿಸಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯಗಳ ಜತೆ ಮಾತುಕತೆ ನಡೆಸಿದ ಅವರು ಈವರೆಗೆ ಕೇಂದ್ರ ಸರ್ಕಾರವು 14.15 ಕೋಟಿ ಡೋಸ್ ಕೊರೊನಾ ಲಸಿಕೆ ಕಳುಹಿಸಿಕೊಟ್ಟಿದೆ, ಅದರಲ್ಲಿ 12.57 ಕೋಟಿ ಡೋಸ್ ಬಳಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದರ ನಡುವೆ ಮಹಾರಾಷ್ಟ್ರಕ್ಕೆ 1121, ಉತ್ತರ ಪ್ರದೇಶಕ್ಕೆ 1700, ಜಾರ್ಖಂಡ್ಗೆ 1500, ಗುಜರಾತ್ಗೆ 1600, ಮಧ್ಯಪ್ರದೇಶಕ್ಕೆ 152 ಹಾಗೂ ಛತ್ತೀಸ್ಗಢಕ್ಕೆ 230 ವೆಂಟಿಲೇಟರ್ಗಳನ್ನು ಪರೈಸುವುದಾಗಿಯೂ ಹರ್ಷವರ್ಧನ್ ಭರವಸೆ ನೀಡಿದ್ದಾರೆ.
ಎಲ್ಲಾ ರಾಜ್ಯಗಳು ಆಮ್ಲಜನಕ ಹಾಗೂ ರೆಮ್ಡಿಸಿವಿರ್ ಕೊರತೆ ವಿಷಯ ಪ್ರಸ್ತಾಪಿಸಿದ್ದವು, ಇವರೆಡರ ಉತ್ತಮ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳು ಸಭೆಯಲ್ಲಿ ಅವರಿಗೆ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಮಹಾರಾಷ್ಟ್ರ, ರಾಜಸ್ಥಾನ, ಕೇರಳ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಗುಜರಾತ್, ದೆಹಲಿ, ತಮಿಳುನಾಡು, ಉತ್ತರ ಪ್ರದೇಶದಲ್ಲಿನ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications