'ದೇವಮಾನವನಿಂದ ಅಪ್ರಾಪ್ತರ ಮೇಲೆ ರೇಪ್', ಸಿಬಿಐನಿಂದ ತನಿಖೆ
ನವದೆಹಲಿ, ಡಿಸೆಂಬರ್ 20: ಇಲ್ಲಿನ ರೋಹಿಣಿ ವಿಜಯ್ ವಿಹಾರದ ಆಶ್ರಮವೊಂದರಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ದೆಹಲಿ ಹೈಕೋರ್ಟ್ ಬುಧವಾರದಂದು ಈ ಆದೇಶ ನೀಡಿದೆ.
ವಿಜಯ್ ವಿಹಾರ್ ನಲ್ಲಿರುವ ಆಧ್ಯಾತ್ಮಿಕ್ ವಿಶ್ವ ವಿದ್ಯಾಲಯ ಆಶ್ರಮದ ಮೇಲೆ ದಾಳಿ ನಡೆಸಿದ್ದ ದೆಹಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
ಬಾಬಾರವರು ಆಶ್ರಮದಲ್ಲಿ ಅಪ್ರಾಪ್ತರ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬಾಬಾ ವೀರೇಂದ್ರ ದೇವ್ ದೀಕ್ಷಿತ್ ಜೊತೆಗೆ ಮಹಿಳೆ ಮತ್ತು ಕಾವಲುಗಾರರನ್ನು ಆಶ್ರಮದಿಂದ ಬಂಧಿಸಲಾಗಿದೆ.

ಆಶ್ರಮದ ಕೊಠಡಿಯಲ್ಲಿದ್ದ ಕೆಲ ಔಷಧಿಗಳನ್ನು ಮತ್ತು ಸಿರೇಂಜ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಎಫ್ಐಆರ್ ದಾಖಲಿಸಲಾಗಿದ್ದು,
ತನಿಖೆ ಜಾರಿಯಲ್ಲಿದೆ ಎಂದು ಪೊಲೀಸರು ಹೇಳಿದ್ದರು.
ಆದರೆ, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷ ಸ್ವಾತಿ ಮಾಲಿವಾಲ್ ಅವರು ದೆಹಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಹೆಚ್ಚಿನ ತನಿಖೆಗಾಗಿ ಮನವಿ ಮಾಡಿಕೊಂಡಿದ್ದರು.
75 ವರ್ಷ ವಯಸ್ಸಿನ ವೀರೇಂದ್ರ ದೇವ್ ದೀಕ್ಷಿತ್ ಅವರು ದೇಶದ ಹಲವೆಡೆ ಆಶ್ರಮಗಳನ್ನು ಹೊಂದಿದ್ದು, 16 ಸಾವಿರಕ್ಕೂ ಅಧಿಕ ಯುವತಿಯರನ್ನು ಆಶ್ರಮದಲ್ಲಿರಿಸಿಕೊಳ್ಳುವ ಯೋಜನೆ ಹಾಕಿಕೊಂಡಿದ್ದ. 1970ರಿಂದ ಆಶ್ರಮವನ್ನು ನಡೆಸುತ್ತಿದ್ದು, ದಿನವೊಂದಕ್ಕೆ 10 ಅಪ್ರಾಪ್ತರ ಮೇಲೆ ಬಲಾತ್ಕಾರ ಮಾಡುತ್ತಿದ್ದ ಎಂದು ಎನ್ ಜಿಒ ಆರೋಪಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications