ಸುಳ್ಳು ಹೇಳಿದ ಪೊಲೀಸರಿಗೆ ವಿಡಿಯೋ ತೋರಿಸಿದ ಹೈಕೋರ್ಟ್
ನವದೆಹಲಿ, ಫೆಬ್ರವರಿ 26: ನ್ಯಾಯಾಲಯದಲ್ಲಿ ಸುಳ್ಳು ಹೇಳಿ ನುಣುಚಿಕೊಳ್ಳಲು ಯತ್ನಿಸಿದ ಪೊಲೀಸರಿಗೆ ಹೈಕೋರ್ಟ್ ವಿಡಿಯೋ ತೋರಿಸಿ ಛೀಮಾರಿ ಹಾಕಿದ ಘಟನೆ ಮಂಗಳವಾರ ನಡೆದಿದೆ.
ದೆಹಲಿ ಹೈಕೋರ್ಟ್ನಲ್ಲಿ ದೆಹಲಿ ಹಿಂಸಾಚಾರದ ಕುರಿತ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಚೋದಾನಕಾರಿ ಹೇಳಿಕೆಗಳನ್ನು ನೀಡಿದ ಬಿಜೆಪಿ ನಾಯಕರ ಮೇಲೆ ಕ್ರಮ ಜರುಗಿಸಿಲ್ಲವೇಕೆ ಎಂದು ಪೊಲೀಸರನ್ನು ಪ್ರಶ್ನೆ ಮಾಡಿತು.
ಈ ವೇಳೆ ನಾವು ಪ್ರಚೋದನಕಾರಿ ಭಾಷಣ ಮಾಡಿದ ಕಪಿಲ್ ಮಿಶ್ರಾ ವಿಡಿಯೋ ನೋಡಿಲ್ಲವೆಂದು ಹೇಳಿ ನುಣುಚಿಕೊಳ್ಳಲು ದೆಹಲಿ ಪೊಲೀಸರು ಯತ್ನಿಸಿದಾಗ, ಇಲ್ಲಿಯೇ ನಿಮಗೆ ವಿಡಿಯೋ ತೋರಿಸುತ್ತೇವೆ ಎಂದು ಹೇಳಿ ಹೈಕೋರ್ಟ್ ನ್ಯಾಯಾಧೀಶರು ಬಿಜೆಪಿ ನಾಯಕರ ಪ್ರಚೋದನಕಾರಿ ವಿಡಿಯೋಗಳನ್ನು ತೋರಿಸಿದ್ದಾರೆ.
ಒಟ್ಟು ನಾಲ್ಕು ವಿಡಿಯೋಗಳನ್ನು ಹೈಕೋರ್ಟ್ ನಲ್ಲಿ ಪ್ರದರ್ಶಿಸಲಾಗಿದೆ. ನಾಲ್ಕು ವಿಡಿಯೋಗಳು ಸಹ ಬಿಜೆಪಿ ನಾಯಕರು ಮಾಡಿದ ದ್ವೇಷ ಭಾಷಣ ಕುರಿತಾದದ್ದೇ ಆಗಿದೆ.

ಪೊಲೀಸರ ಮಾತನ್ನೂ ಕೇಳುವುದಿಲ್ಲ: ಕಪಿಲ್ ಮಿಶ್ರಾ
ಬಿಜೆಪಿಯ ಕಪಿಲ್ ಮಿಶ್ರಾ ಎರಡು ದಿನ ಹಿಂದೆಯಷ್ಟೇ ನೀಡಿದ್ದ ಪ್ರಚೋದನಕಾರಿ ಹೇಳಿಕೆಯ ವಿಡಿಯೋವನ್ನು ಮೊದಲಿಗೆ ನ್ಯಾಯಾಲಯದಲ್ಲಿ ಪ್ರದರ್ಶಿಸಲಾಗಿದೆ. ವಿಡಿಯೋದಲ್ಲಿ ಕಪಿಲ್ ಮಿಶ್ರಾ, 'ಡೊನಾಲ್ಡ್ ಟ್ರಂಪ್ ಭಾರತದಿಂದ ಹೋಗುವವರೆಗೆ ಮಾತ್ರವೇ ಸುಮ್ಮನಿರುತ್ತೇವೆ, ಆ ನಂತರ ನಾವು ಪೊಲೀಸರ ಮಾತನ್ನೂ ಕೇಳುವುದಿಲ್ಲ' ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

'ಶಾಹೀನ್ ಬಾಗ್ ಪ್ರತಿಭಟನಾಕಾರರು ಅತ್ಯಾಚಾರಿಗಳು'
ಎರಡನೇಯ ವಿಡಿಯೋ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರದ್ದಾಗಿತ್ತು. 'ಶಾಹೀನ್ ಬಾಗ್ ಪ್ರತಿಭಟನಾಕಾರರು ಅತ್ಯಾಚಾರಿಗಳು, ಕೊಲೆಗಡುಕರು' ಎಂದು ಪರ್ವೀಶ್ ವರ್ಮಾ ಹೇಳಿಕೆ ನೀಡಿದ್ದರು. 'ದೆಹಲಿಯ ಜನತೆಯ ಮನೆಗಳಿಗೆ ಅವರು ನುಗ್ಗುತ್ತಾರೆ ನಿಮ್ಮ ಹೆಂಡತಿ, ಮಕ್ಕಳ ಮೇಲೆ ಅತ್ಯಾಚಾರ ಎಸಗುತ್ತಾರೆ' ಎಂದು ಅವರು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿತ್ತು, ಅವರ ಮೇಲೆ ಯಾವ ಕ್ರಮವನ್ನೂ ಜರುಗಿಸಿರಲಿಲ್ಲ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿಡಿಯೋ ಪ್ರದರ್ಶನ
ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ವಿಡಿಯೋವನ್ನು ಸಹ ಹೈಕೋರ್ಟ್ನಲ್ಲಿ ಪ್ರದರ್ಶಿಸಲಾಗಿದ್ದು, ದೆಹಲಿ ಚುನಾವಣೆ ಸಮಯದಲ್ಲಿ 'ಗೋಲಿ ಮಾರೋ ಸಾಲೋಂಕೊ..' ಎಂದು ವೇದಿಕೆ ಮೇಲಿಂದ ಘೋಷಣೆ ಕೂಗಿದ್ದ ವಿಡಿಯೋ ತೋರಿಸಲಾಗಿದೆ.

ಬಹಿರಂಗ ಬೆದರಿಕೆ ಹಾಕಿರುವ ಶಾಸಕ ಅಭಯ್ ವರ್ಮಾ
ಹೊಸ ಬಿಜೆಪಿ ಶಾಸಕ ಅಭಯ್ ವರ್ಮಾ ನಿನ್ನೆಯಷ್ಟೆ ಬೆಂಬಲಿಗರೊಂದಿಗೆ ದೆಹಲಿಯ ಬೀದಿಗಳಲ್ಲಿ 'ಗೋಲಿ ಮಾರೋ ಸಾಲೋಂಕೊ' ಎಂದು ಹೇಳುತ್ತಾ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದ ವಿಡಿಯೋವನ್ನು ನ್ಯಾಯಾಲಯದಲ್ಲಿ ಪ್ರದರ್ಶಿಸಲಾಯಿತು.

ದೆಹಲಿ ಪೊಲೀಸರ ಮೇಲೆ ಹೈಕೋರ್ಟ್ ಗರಂ
ದೆಹಲಿ ಪೊಲೀಸರ ಮೇಲೆ ಹರಿಹಾಯ್ದ ದೆಹಲಿ ಹೈಕೋರ್ಟ್ ದ್ವೇಷ ಭಾಷಣ ಮಾಡಿರುವ ಈ ನಾಯಕರ ವಿರುದ್ಧ ಕ್ರಮ ಏಕೆ ಕೈಗೊಂಡಿಲ್ಲ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ ಇವರುಗಳ ಮೇಲೆ ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications