ಗುರುಗಾಂವ್ ಘಟನೆಯಿಂದ ಶಾಲೆಗಳಿಗೆ ಬಿಗಿ ಕಾನೂನು ಜಾರಿ: ಕೇಂದ್ರ
ನವದೆಹಲಿ, ಸೆಪ್ಟೆಂಬರ್ 12: ಮಕ್ಕಳ ಮೇಲೆ ಇತ್ತೀಚೆಗೆ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯ ತಡೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಕುರಿತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಜಂಟಿಯಾಗಿ ಸಭೆ ಕರೆದಿದೆ.
ರಯಾನ್ ಶಾಲೆ ವಿದ್ಯಾರ್ಥಿ ಹತ್ಯೆ: ಪ್ರಾಂಶುಪಾಲ ಸೇರಿ 4 ಬಂಧನ
ಸೆ.13 ರಂದು ನಡೆಯಲಿರುವ ಈ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಗುರುಗಾಂವ್ ನ ರಯಾನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ 7 ವರ್ಷದ ಮಗುವನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆಯ ನಂತರ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಮಕ್ಕಳ ರಕ್ಷಣೆಯ ಕುರಿತು ಗಂಭೀರವಾಗಿ ಚಿಂತಿಸುತ್ತಿದೆ.
ಈ ಕುರಿತು ನವದೆಹಲಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮನೇಕಾ ಗಾಂಧಿ, ಈ ಸಭೆಯಲ್ಲಿ ಪ್ರತಿಯೊಂದು ಶಾಲೆಯೂ ಅನುಸರಿಸಲೇಬೇಕಾದ ಕೆಲವು ನಿಯಮಗಳನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಎಂದು ಹೇಳಿದ್ದಾರೆ.