ನೂತನ ಸಂಸತ್ ಭವನ ಆತ್ಮನಿರ್ಭರ ಭಾರತ ಸೃಷ್ಟಿಗೆ ಸಾಕ್ಷಿ: ಮೋದಿ
ನವದೆಹಲಿ, ಡಿಸೆಂಬರ್ 10: ಹಳೆದ ಸಂಸತ್ತಿನ ಕಟ್ಟಡವು ಸ್ವಾತಂತ್ರ್ಯದ ನಂತರ ಭಾರತಕ್ಕೆ ಹೊಸ ನಿರ್ದೇಶನ ನೀಡಿತು. ಹೊಸ ಕಟ್ಟಡವು ಆತ್ಮನಿರ್ಭರ ಭಾರತಕ್ಕೆ ಸಾಕ್ಷಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
*ರಾಷ್ಟ್ರದ ಅವಶ್ಯಕತೆಗಳನ್ನು ಪೂರೈಸುವ ಕೆಲಸವನ್ನು ಮಾಡಲಾಯಿತು. ಹೊಸ ಕಟ್ಟಡದಲ್ಲಿ 21ನೇ ಶತಮಾನದ ಭಾರತದ ಮಹತ್ವಾಕಾಂಕ್ಷೆಯನ್ನು ಸಾಕಾರಗೊಳಿಸಲಾಗುತ್ತದೆ ಎಂದು ಹೇಳಿದರು.
ನೂತನ ಸಂಸತ್ ಭವನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ
*ಭಾರತದಲ್ಲಿ ಪ್ರಜಾಪ್ರಭುತ್ವ ಒಂದು ಸಂಸ್ಕೃತಿ. ಪ್ರಜಾಪ್ರಭುತ್ವವು ಒಂದು ಜೀವನ ಮೌಲ್ಯ. ಒಂದು ಜೀವನ ವಿಧಾನವಾಗಿದೆ.ಭಾರತದ ಪ್ರಜಾಪ್ರಭುತ್ವವು ಶತಮಾನಗಳ ಅನುಭವದೊಂದಿಗೆ ಅಭಿವೃದ್ಧಿಪಡಿಸಿದ ವ್ಯವಸ್ಥೆಯಾಗಿದೆ ಎಂದರು.
*ನಾವು ಭಾರತ ಮೊದಲು ಎನ್ನುವ ಪ್ರತಿಜ್ಞೆಯನ್ನು ಮಾಡೋಣ, ನಮ್ಮ ನಿರ್ಧಾರಗಳು ರಾಷ್ಟ್ರವನ್ನು ಬಲಪಡಿಸಬೇಕು ಮತ್ತು ಅದೇ ಪ್ರಮಾಣದಲ್ಲಿ ಅಳೆಯಬೇಕು. ಮುಂದಿನ 25-26 ವರ್ಷಗಳಲ್ಲಿ 100 ವರ್ಷಗಳ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತ ಹೇಗೆ ನೋಡಬೇಕೆನ್ನುವ ಕನಸು ಹೊತ್ತು ಸಾಗಿರಿ ಎಂದು ಸಲಹೆ ನೀಡಿದರು.
*ಹಳೆಯ ಸಂಸತ್ ಭವನವು ಸ್ವಾತಂತ್ರ್ಯೋತ್ತರ ಭಾರತಕ್ಕೆ ನಿರ್ದೇಶನ ನೀಡಿದರೆ ಹೊಡ ಕಟ್ಟಡವು ಆತ್ಮನಿರ್ಭರ ಭಾರತ ಸೃಷ್ಟಿಗೆ ಸಾಕ್ಷಿಯಾಗುತ್ತದೆ.
* ವಾಸ್ತವವಾಗಿ 3,015 ಚ.ಮೀಟರ್ ವಿಸ್ತೀರ್ಣದಲ್ಲಿ ಲೋಕಸಭೆ ನಿರ್ಮಾಣಲಿದ್ದು, 1,145 ಚ.ಮೀಟರ್ ವಿಸ್ತೀರ್ಣದಲ್ಲಿ 543 ಆಸನಗಳ ಬದಲಿಗೆ 888 ಆಸನಗಳ ವ್ಯವಸ್ಥೆ ಮಾಡಲಾಗುವುದು.
* 3,220 ಚ.ಮೀಟರ್ ವಿಸ್ತೀರ್ಣದಲ್ಲಿ ರಾಜ್ಯಸಭೆ ನಿರ್ಮಾಣವಾಗಲಿದ್ದು, 1,232 ಚ.ಮೀಟರ್ ವಿಸ್ತೀರ್ಣದಲ್ಲಿ 245 ಸ್ಥಾನಗಳ ಬದಲಾಗಿ 384 ಆಸನಗಳು ಇರಲಿವೆ ಎಂದು ತಿಳಿದುಬಂದಿದೆ.
ನೋಡಿ ಭಾರತದ ಮೊದಲ ವರ್ಟಿಕಲ್ ಫಾರೆಸ್ಟ್ ಟವರ್
* ಪ್ರತಿ ಆಸನಗಳು 60 ಸೆಂ.ಮೀ. ಅಗಲ ಮತ್ತು 40 ಸೆಂ.ಮೀ. ಎತ್ತರ ಇರಲಿದ್ದು ಜಂಟಿ ಅಧಿವೇಶನ ನಡೆಯುವ ಸಮಯದಲ್ಲಿ ಹೊಸ ಲೋಕಸಭೆಯಲ್ಲಿ 1,224 ಸದಸ್ಯರಿಗೆ ಕೂರಲು ಅವಕಾಶ ಕಲ್ಪಿಸಬಹುದಾಗಿದೆ.
Recommended Video