ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಯ ಗೋಡೆ ಮೇಲೆ ಹೀಗೆ ಬರೆದಿದೆ..
Recommended Video

ನವದೆಹಲಿ, ಜನವರಿ 03: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಹೋದವರಿಗೆಲ್ಲಾ ಅಲ್ಲಿನ ಗೋಡೆಗೆ ಹಾಕಿರುವ ಫಲಕವೊಂದರ ಮೇಲೆ ದೃಷ್ಠಿ ಹರಿದೇ ಹರಿಯುತ್ತದೆ. ಫಲಕದ ಮೇಲೆ ಬರೆದಿರುವುದನ್ನು ಓದಿದ ಮೇಲೆ ಗಡ್ಕರಿ ಅವರ ಕನಸು ಏನು ಎಂಬುದು ಅರ್ಥವಾಗುತ್ತದೆ. ಇಷ್ಟಕ್ಕೂ ಆ ಫಲಕದ ಮೇಲೆ ಬರೆದಿರುವುದು ಏನು?
'ಅಮೆರಿಕ ಶ್ರೀಮಂತ ರಾಷ್ಟ್ರ ಎಂಬ ಕಾರಣಕ್ಕೆ ಅದರ ರಸ್ತೆಗಳು ಚೆನ್ನಾಗಿವೆ ಎಂಬುದು ಸುಳ್ಳು, ಅಮೆರಿಕದ ರಸ್ತೆಗಳು ಚೆನ್ನಾಗಿವೆ ಹಾಗಾಗಿ ಅಮೆರಿಕ ಶ್ರೀಮಂತ ರಾಷ್ಟ್ರವಾಗಿದೆ' ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಜಾನ್ ಎಫ್.ಕೆನಡಿ ಅವರ ಪ್ರಖ್ಯಾತ ಮಾತೊಂದನ್ನು ದೊಡ್ಡ ಅಕ್ಷರದಲ್ಲಿ ಬರೆಸಿ ತಮ್ಮ ಕಚೇರಿಯ ಗೋಡೆಯ ಮೇಲೆ ಹಾಕಿಸಿಕೊಂಡಿದ್ದಾರೆ ಸಚಿವ ನಿತಿನ್ ಗಡ್ಕರಿ.

ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ನಿತಿನ್ ಗಡ್ಕರಿ ಅವರು ಮುಖ್ಯ ಕಚೇರಿಯಲ್ಲಿ ಈ ಬೋರ್ಡ್ ಹಾಕಲಾಗಿದೆ. ಜಾನ್ ಎಫ್ ಕೆನಡಿ ಅವರ ಈ ಮೌಲಿಖ ಮಾತನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿರುವ ನಿತಿನ್ ಗಡ್ಕರಿ ಅವರು ಜಾರಿಗೆ ತರಬೇಕೆಂಬ ಉದ್ದೇಶದಿಂದಲೇ ಅದನ್ನು ತಮ್ಮ ಕಚೇರಿಯಲ್ಲಿ ದೊಡ್ಡ ಅಕ್ಷರದಲ್ಲಿ ಅಚ್ಚು ಹಾಕಿಸಿ ಹಾಕಿಸಿಕೊಂಡಿದ್ದಾರೆ.
ಇತ್ತೀಚೆಗೆ ತಾನೇ ಬೆಂಗಳೂರು-ಮೈಸೂರು ನಡುವೆ ಆರು ಪಥದ ರಸ್ತೆ ನಿರ್ಮಾಣಕ್ಕೆ ನಿತಿನ್ ಗಡ್ಕರಿ ಹಸಿರು ನಿಶಾನೆ ತೋರಿಸಿದ್ದಾರೆ. ಅಷ್ಟೆ ಅಲ್ಲದೆ ಹೆದ್ದಾರಿ ನಿರ್ವಹಣೆ ವೆಚ್ಚವನ್ನು ಹೆಚ್ಚು ಮಾಡಿದ್ದಾರೆ.
ಗಡ್ಕರಿ ಅವರ ಕಚೇರಿಯಲ್ಲಿ ಹಾಕಲಾಗಿರುವ ಫಲಕ ಅವರ ಕೆಲಸದಲ್ಲಿಯೂ ಪ್ರತಿಫಲವಾಗಲಿ ಎಂಬುದೇ ಎಲ್ಲರ ಆಶಯ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications