ಟೀನಾ ದಬಿ, ಅಮೀರ್ ನಿಶ್ಚಿತಾರ್ಥ ಲವ್ ಜಿಹಾದ್ ಎಂದ ಹಿಂದೂ ಮಹಾಸಭಾ
ಯುಪಿಎಸ್ ಟಾಪರ್ಸ್ ಟೀನಾ ದಬಿ ಮತ್ತು ಅಮೀರ್ ನಿಶ್ಚಿತಾರ್ಥ ನೋವಿನ ಸಂಗತಿ ಮತ್ತು ಅದು ಲವ್ ಜಿಹಾದ್ ಎಂದು ಹಿಂದೂ ಮಹಾಸಭಾ ಟೀನಾ ದಬಿ ಅವರ ತಾಯಿಗೆ ಪತ್ರ ಬರೆದಿದೆ.
ನವದೆಹಲಿ, ನವೆಂಬರ್, 29: ಕೇಂದ್ರ ಲೋಕಾಸೇವಾ ಆಯೋಗದ ಪರಿಕ್ಷೆಯಲ್ಲಿ ಪ್ರಥಮ ಶ್ರೇಣಿ ಪಡೆದು ಉತ್ತೀರ್ಣರಾದ ಟೀನಾ ದಬಿ ಮತ್ತು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣಾರಾದ ಅಮೀರ್ ಉಲ್ ಶಫಿ ಮದುವೆಯನ್ನು ಹಿಂದು ಮಹಾಸಭಾ ವಿರೋಧಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಿಂದೂ ಸಮಹಾಸಭಾ, " ಯುಪಿಎಸ್ ಪರೀಕ್ಷೆಯಲ್ಲಿ ಟೀನಾ ದಬಿ ಅವರು ಪ್ರಥಮ ಶ್ರೇಣಿ ಪಡೆದಿರುವುದು ಹೆಮ್ಮೆಯ ಸಂಗತಿ ಆದರೆ ಅವರು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿರುವುದು ನೋವಿನ ಸಂಗತಿ ಎಂದು ತಿಳಿಸಿದೆ.[ಫಸ್ಟ್ Rank ರಾಣಿಗೆ ಒಲಿದ ಸೆಕೆಂಡ್ Rank ರಾಜು!]

ಟೀನಾದಬಿ ಅವರು ಅತರ್ ಜತೆ ವಿವಾಹವಾಗುತ್ತಿರುವುದು ಲವ್ ಜಿಹಾದ್ ಆಗಿದೆ ಎಂದು ಹಿಂದು ಬಲಪಂಥೀಯ ಬಣದ ಪ್ರಧಾನ ಕಾರ್ಯದರ್ಶಿ ಮುನ್ನಾ ಕುಮಾರ್ ಶರ್ಮಾ ಟೀನಾ ದಬಿ ತಾಯಿಗೆ ಪತ್ರದಲ್ಲಿ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಅತರ್ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಮನವೊಲಿಸಬೇಕೆಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಮದುವೆಗೂ ಮುನ್ನ ಸರಿಯಾಗಿ ಯೋಚಿಸುವಂತೆ ಮತ್ತು ಪಿತೂರಿ ನಡೆಸುವವರ ವಿರುದ್ಧ ಹೋರಾಡಲು ಕೈ ಜೋಡಿಸುವಂತೆ ಅವರು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಫೈನಾನ್ಸಿಯಲ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ.
ಕಳೆದ ಮೇ 11ರಂದು ಸನ್ಮಾನ ಸಮಾರಂಭವೊಂದರಲ್ಲಿ ನಾವು ಭೇಟಿಯಾಗಿದ್ದೆವು. ಸಂಜೆ ಹೊತ್ತಿಗೆ ಅತರ್ ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದರು. ಅವರಿಗೆ ನನ್ನ ಮೇಲೆ ಲವ್ ಅಟ್ ಫಸ್ಟ್ ಸೈಟ್ ಆಗಿತ್ತು ಎಂದು ಟೀನಾ ತಮ್ಮ ಪ್ರೇಮದ ಕುರಿತು ತಿಳಿಸಿದ್ದರು.
ಮದೆವೆ ಕುರಿತು ಬರುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಟೀನಾ ಅವರು " ನಮ್ಮ ಪ್ರೀತಿಯಿಂದ ನನಗೆ ತುಂಬಾ ಸಂತೋಷವಾಗಿದೆ. ವಿರೋಧಗಳು ಕೇಳಿಬಂದಾಗ ತುಂಬಾ ನೋವಾಗುತ್ತದೆ. ಸಾರ್ವಜನಿಕ ಜೀವನದಲ್ಲಿ ಇದೆಲ್ಲಾ ಸಾಮಾನ್ಯ ಎಂದು ತಿಳಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications