ಐತಿಹಾಸಿಕ ದೋಷವೊಂದನ್ನು ಸರಿಪಡಿಸಲಾಗಿದೆ; ಬಾಬ್ರಿ ಬಗ್ಗೆ ಜಾವಡೇಕರ್ ಹೇಳಿಕೆ
ನವದೆಹಲಿ, ಜನವರಿ 25: "ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಲವು ಧರ್ಮದ ಜನರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ದೇಶದ ಏಕತೆಯ ದೇಗುಲವಾಗಲಿದೆ" ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಹೆಚ್ಚಿನ ಮೊತ್ತವನ್ನು ದೇಣಿಗೆ ನೀಡಿರುವವರಿಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು, ಈ ಸಂದರ್ಭ ಮಾತನಾಡಿದ ಅವರು, "ರಾಮ ಜನ್ಮಭೂಮಿ ಆಂದೋಲನ" ದೇಶದ ಸ್ವಗೌರವದ ಆಂದೋಲನ. ಮುಂದೆ ತಲೆ ಎತ್ತಲಿರುವ ರಾಮ ಜನ್ಮಭೂಮಿ ದೇಶದ ಏಕತೆ ಸಾರುವ ದೇಗುಲವಾಗಲಿದೆ. ದೇಶವನ್ನು ರಾಮ ಐಕ್ಯಗೊಳಿಸಿದ್ದಾನೆ ಹಾಗೂ ದೇಶದ ಏಕತೆಯನ್ನು ಪ್ರತಿನಿಧಿಸುತ್ತಿದ್ದಾನೆ" ಎಂದರು.
"ಇಡೀ ದೇಶದ ಶಕ್ತಿ ಅಯೋಧ್ಯೆ ರಾಮ ಮಂದಿರದಲ್ಲಿದೆ ಎಂದು ತಿಳಿದುಕೊಂಡಿದ್ದ ಬಾಬರ್, ಮಂದಿರವನ್ನು ಕೆಡವಲು ನೋಡಿದ. ಆನಂತರ 1992ರ ಡಿ.6 ರಂದು ದೊಡ್ಡ ಐತಿಹಾಸಿಕ ದೋಷವನ್ನು ಸರಿಪಡಿಸಲಾಯಿತು" ಎಂದು ಬಾಬ್ರಿ ಮಸೀದಿ ಬಗ್ಗೆ ಹೇಳಿದ್ದಾರೆ. ಜನರಿಗೆ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಹೇಳಿದರೆ, ಸಂತೋಷವಾಗಿ ದೇಣಿಗೆ ನೀಡುತ್ತಾರೆ. ಹತ್ತು ರೂಪಾಯಿಯಿಂದ ಆರಂಭವಾಗಿ ಹತ್ತು ಕೋಟಿ ರೂಪಾಯಿವರೆಗೂ ದೇಣಿಗೆ ನೀಡುತ್ತಿದ್ದಾರೆ ಎಂದರು.

ಕೇಂದ್ರ ಸಚಿವ ಜಾವಡೇಕರ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ, ಅಯೋಧ್ಯೆ ಪ್ರಕರಣದ ಕಕ್ಷಿದಾರರೂ ಆಗಿದ್ದ ಇಕ್ಬಾಲ್ ಅನ್ಸಾರಿ, "ರಾಜಕಾರಣಿಗಳು ಈ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುತ್ತಾರೆ. ಏನಾಯಿತೋ ಅದನ್ನು ಮತ್ತೆ ಕೆಣಕಬಾರದು. ಹೀಗೆ ಮಾಡಿದರೆ ಜನರು ಹಳೆಯದನ್ನು ನೆನೆಸಿಕೊಂಡು ಮತ್ತೆ ಉದ್ರೇಕಗೊಳ್ಳುತ್ತಾರೆ. ರಾಜಕಾರಣಿಗಳು ಹಿಂದೂ ಹಾಗೂ ಮುಸ್ಲಿಮರ ನಡುವಿನ ಏಕತೆ ಬಗ್ಗೆಯಷ್ಟೇ ಮಾತನಾಡಿದರೆ ಒಳ್ಳೆಯದು" ಎಂದು ಹೇಳಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications