'ದೆಹಲಿ ಹಿಂಸಾಚಾರಕ್ಕೆ ಯಾರೇ ಕಾರಣರಾಗಿದ್ದರೂ ಉಳಿಸುವುದಿಲ್ಲ'
ನವದೆಹಲಿ, ಮಾರ್ಚ್ 12: ದೆಹಲಿ ಗಲಭೆಗೆ ಕಾರಣರಾದ ಅಪರಾಧಿಗಳು, ಯಾವುದೇ ಧರ್ಮ, ಜಾತಿ ಅಥವಾ ಪಕ್ಷದವರಾಗಿರಬಹುದು, ಅವರನ್ನು ಉಳಿಸಲಾಗುವುದಿಲ್ಲ ಎಂದು ರಾಜ್ಯಸಭೆಯಲ್ಲಿ ಅಮಿತ್ ಶಾ ಗುಡುಗಿದ್ದಾರೆ.
ದೆಹಲಿ ಹಿಂಸಾಚಾರದ ಬಗ್ಗೆ ವಿರೋಧ ಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಗುರುವಾರ ಉತ್ತರಿಸಿದ್ದಾರೆ. ದೆಹಲಿ ಹಿಂಸಾಚಾರದಲ್ಲಿ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಾ ಹೇಳಿದರು.
ನಾಪತ್ತೆಯಾಗಿದ್ದ ಐಬಿ ಅಧಿಕಾರಿ ಮೃತದೇಹ ಚರಂಡಿಯಲ್ಲಿ ಪತ್ತೆ
ಪ್ರಚೋದಿತ ದೆಹಲಿ ಗಲಭೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರಿಂದ ಹಿಂಸಾಚಾರ ವ್ಯಾಪಿಸಲಿಲ್ಲ ಎಂದು ದೆಹಲಿ ಪೊಲೀಸರನ್ನು ಶಾ ಸಮರ್ಥಿಸಿಕೊಂಡಿದ್ದಾರೆ.
ಹಿಂಸಾಚಾರದ ಸಂದರ್ಭದಲ್ಲಿ ದೆಹಲಿ ಪೊಲೀಸರು ಶ್ಲಾಘನೀಯ ಕೆಲಸವನ್ನು ಮಾಡಿದ್ದಾರೆ, ಹಿಂಸಾಚಾರವನ್ನು ಹಿಂಸಾಚಾರ ಹರಡದಂತೆ ಕೇವಲ 36 ಗಂಟೆಗಳ ಒಳಗೆ ಕೊನೆಗೊಳಿಸಿದ್ದಾರೆ ಎಂದು ಶಾ ಹೇಳಿದ್ದಾರೆ. ಹಿಂಸಾಚಾರಕ್ಕೆ ಕಾರಣರಾದ ಯಾರನ್ನು ಸರ್ಕಾರ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.