ಚುನಾವಣಾ ಅಭ್ಯರ್ಥಿ ಆಯ್ಕೆ ಮುನ್ನ ಎಚ್ಚರ ಎಂದ ಸುಪ್ರೀಂಕೋರ್ಟ್
ನವದೆಹಲಿ, ಫೆಬ್ರವರಿ.13: ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಕುರಿತು ಎಲ್ಲ ರಾಜಕೀಯ ಪಕ್ಷಗಳು ತಮ್ಮ ವೆಬ್ ಸೆಟ್ ಗಳಲ್ಲೇ ಮಾಹಿತಿಯನ್ನು ಅಪ್ ಲೋಡ್ ಮಾಡಬೇಕು ಎಂದು ಸುಪ್ರೀಂಕೋರ್ಟ್ ಖಡಕ್ ಸಂದೇಶ ರವಾನಿಸಿದೆ.
ಬಿಜೆಪಿ ಮುಖಂಡೆ ಹಾಗೂ ವಕೀಲೆ ಅಶ್ವಿನಿ ಕುಮಾರ್ ಉಪಾಧ್ಯಾನ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ನೇತೃತ್ವದ ಪೀಠ ನಡೆಸಿದ್ದು, ಮಹತ್ವದ ಆದೇಶವನ್ನು ಹೊರಡಿಸಿದೆ.
ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ಬಗ್ಗೆ ಮತ್ತು ಅಪರಾಧದ ಪ್ರಕರಣಗಳ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ವೆಬ್ ಸೈಟ್ ನಲ್ಲಿಯೇ ಪ್ರಕಟಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯವು ಸೂಚನೆ ನೀಡಿದೆ.

ಅಪರಾಧ ಹಿನ್ನೆಲೆ ಉಳ್ಳವರಿಗೆ ಟಿಕಟ್ ನೀಡುವುದೇಕೆ?
ರಾಜಕೀಯ ಪಕ್ಷಗಳು ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಉದ್ದೇಶವಾದರೂ ಏನು ಎಂದು ಸುಪ್ರೀಕೋರ್ಟ್ ಪ್ರಶ್ನೆ ಮಾಡಿದೆ. ಒಂದು ವೇಳೆ ಅಂಥ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಲ್ಲಿ, ಅಪರಾಧ ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ವಿಸ್ತೃತವಾಗಿ ಪ್ರಕಟಿಸಬೇಕು ಎಂದು ಕೋರ್ಟ್ ಸೂಚಿಸಿದೆ.

ಪಕ್ಷಗಳಿಗೆ ಅಭ್ಯರ್ಥಿ ಆಯ್ಕೆ ಮಾನದಂಡವೇನು?
ಇನ್ನು, ಚುನಾವಣೆಗಳಲ್ಲಿ ಟಿಕೆಟ್ ನೀಡುವ ರಾಜಕೀಯ ಪಕ್ಷಗಳಿಗೆ ಗೆಲ್ಲುವ ಅಭ್ಯರ್ಥಿಗಳು ಎಂಬುದಷ್ಟೇ ಮಾನದಂಡವೇ ಎಂದು ಕೋರ್ಟ್ ಪ್ರಶ್ನೆಸಿದೆ. ಇನ್ನು ಮುಂದೆ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯುಳ್ಳ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸುವ ಮೊದಲು, ಆ ಅಭ್ಯರ್ಥಿಯ ಆಯ್ಕೆಗೆ ಕಾರಣವೇನು ಎಂಬುದರ ಬಗ್ಗೆ ಪಕ್ಷವು ಸ್ಪಷ್ಟನೆಯನ್ನು ನೀಡಬೇಕು ಎಂದು ಕೋರ್ಟ್ ಹೇಳಿದೆ.

ಮಾಧ್ಯಮಗಳಿಗೂ ನೀಡಬೇಕು ಸಂಪೂರ್ಣ ಮಾಹಿತಿ
ಒಂದು ವೇಳೆ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಲ್ಲಿ 48 ಗಂಟೆಗಳಲ್ಲೇ ಒಂದು ಸ್ಥಳೀಯ ಮತ್ತು ಒಂದು ರಾಷ್ಟ್ರೀಯ ಪತ್ರಿಕೆ, ಹಾಗೂ ಪಕ್ಷದ ಫೇಸ್ ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಅಭ್ಯರ್ಥಿಯ ವಿರುದ್ಧ ಇರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿಯ ಬಗ್ಗೆ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಕೋರ್ಟ್ ಸೂಚಿಸಿದೆ.

ಚುನಾವಣಾ ಆಯೋಗಕ್ಕೂ ಸೂಚನೆ ರವಾನಿಸಿದ ಸುಪ್ರೀಂಕೋರ್ಟ್
ಇದರ ಜೊತೆಗೆ ಕೇಂದ್ರ ಚುನಾವಣಾ ಆಯೋಗಕ್ಕೂ ಸುಪ್ರೀಂಕೋರ್ಟ್ ಖಡಕ್ ಸಂದೇಶವೊಂದನ್ನು ರವಾನಿಸಿದೆ. ರಾಜಕೀಯ ಪಕ್ಷಗಳು ಯಾರಿಗೂ ಗೊತ್ತಿರದ ಪತ್ರಿಕೆಗಳಲ್ಲಿ ಈ ಬಗ್ಗೆ ಪ್ರಕಟಿಸುವ ಮೂಲಕ ತಪ್ಪಿಸಿಕೊಳ್ಳುವ ಅಪಾಯವಿದೆ. ಹೀಗಾಗಿ ಯಾವ ಪತ್ರಿಕೆಗಳಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಪ್ರಕಟಣೆ ನೀಡಬೇಕು ಎಂಬುದರ ಬಗ್ಗೆ ಕೇಂದ್ರ ಚುನಾವಣಾ ಆಯೋಗವೇ ತೀರ್ಮಾನಿಸಬೇಕು. ಅಧಿಕೃತವಾದ ಪತ್ರಿಕೆಗಳ ಪಟ್ಟಿಯನ್ನು ಆದಷ್ಟು ಬೇಗ ತಯಾರಿಸಿ ನೀಡಬೇಕು ಎಂದು ಕೋರ್ಟ್ ಆಯೋಗಕ್ಕೆ ಸೂಚನೆ ನೀಡಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications