ಕಾನೂನಿಗೆ ತಲೆಬಾಗುತ್ತೇನೆ, ಜೀವಕ್ಕಿಂತಲೂ ಸ್ವಾತಂತ್ರ್ಯವೇ ಮುಖ್ಯ: ಪಿ ಚಿದಂಬರಂ
ನವದೆಹಲಿ, ಆಗಸ್ಟ್ 21: ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆ ಬಂಧನ ಭೀತಿ ಎದುರಿಸಿದ್ದ ಮಾಜಿ ಹಣಕಾಸು ಸಚಿವ ಏಕಾ-ಏಕಿ ಸಂಜೆ ವೇಳೆಗೆ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಕಾಣಿಸಿಕೊಂಡು ಸುದ್ದಿಗೋಷ್ಠಿ ನಡೆಸಿದರು.
ನನ್ನ ಮೇಲೆ ಹಾಗೂ ಮಗನ ಮೇಲೆ ಹೊರಿಸಿರುವ ಆರೋಪಗಳು ಸುಳ್ಳು, ಈ ಪ್ರಕರಣದಲ್ಲಿ ನಾವು ಆರೋಪಿಗಳಲ್ಲ ಎಂದು ಹೇಳಿದ ಚಿದಂಬರಂ ಕಾನೂನು ರೀತ್ಯಾ ನ್ಯಾಯ ದೊರಕುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನಾನು ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದೇನೆ ಎಂಬ ಆರೋಪ ಕೇಳಿ ಗಾಬರಿಗೊಂಡಿದ್ದೇನೆ. ನಾನು ಕಾನೂನಿನ ರಕ್ಷಣೆಗೆ ಯತ್ನಿಸುತ್ತಿದ್ದೆ. ನಾನು ಬೆಳಿಗ್ಗಿನಿಂದ ನನ್ನ ವಕೀಲರೊಂದಿಗೆ ಕಾನೂನು ರಕ್ಷಣೆಗೆ ಯತ್ನಿಸುತ್ತಿದ್ದೆ. ನನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ನಾನು ಕಾನೂನಿಗೆ ತಲೆಬಾಗುತ್ತೇನೆ. ಕಾನೂನು ಅನ್ವಯಿಸುವ ಕಾರ್ಯವನ್ನು ದುಷ್ಟರ ಕೈಯಲ್ಲಿರುವ ಸಿಬಿಐ ನಂತಹಾ ಸಂಸ್ಥೆ ಮಾಡುತ್ತಿದ್ದರೂ ಸಹ ಕಾನೂನನ್ನು ಗೌರವಿಸುತ್ತೇನೆ ಎಂದು ಪಿ.ಚಿದಂಬರಂ ಹೇಳಿದರು.

ತಮ್ಮ ಮೇಲೆ ಹೊರಿಸಲಾಗಿದ್ದ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಜೀವನ ಮತ್ತು ಸ್ವಾತಂತ್ರ್ಯ ಎರಡರಲ್ಲಿ ಯಾವುದು ಬೇಕು ಎಂದು ಕೇಳಿದರೆ ನಾನು ಸ್ವಾತಂತ್ರ್ಯವನ್ನು ಆಯ್ದು ಕೊಳ್ಳುತ್ತೇನೆ ಎಂದು ಹೇಳಿದರು.
ಸುದ್ದಿಗೋಷ್ಠಿ ಮುಗಿಸಿ ಪಿ.ಚಿದಂಬರಂ ಅವರು ದೆಹಲಿಯ ಜೋರ್ ಬಾಗ್ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದರು. ಅಲ್ಲಿಯೇ ಸಿಬಿಐ ಮತ್ತು ಇಡಿ ಅಧಿಕಾರಿಗಳಾಗಿ ಕಾಯುವುದಾಗಿ ಅವರು ಹೇಳಿದರು.
ಅಂತೆಯೇ ಜೋರ್ ಬಾಗ್ನಲ್ಲಿನ ನಿವಾಸಕ್ಕೆ ಪಿ.ಚಿದಂಬರಂ ಅವರು ತೆರಳಿದರು. ಅಲ್ಲಿಗೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ಬಂದರು. ಕೆಲವೇ ಕ್ಷಣಗಳಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications