''ಸದ್ಯದ ಪರಿಸ್ಥಿತಿಯಲ್ಲಿ ನನಗೆ ಮುಂಬೈಗೆ ಹೋಗುವ ಧೈರ್ಯವಿಲ್ಲ'': ನಿತಿನ್ ಗಡ್ಕರಿ

ಇಡೀ ದೇಶದಲ್ಲಿ ಕೊರೊನಾದ ಮುಖ್ಯ ಸ್ಥಾನವಾಗಿ ಪರಿಣಮಿಸಿರುವ ವಾಣಿಜ್ಯ ನಗರಿ ಮುಂಬೈಗೆ ಹೋಗಲು ಸ್ವತಃ ಕೇಂದ್ರ ಸಚಿವರಿಗೆ ಧೈರ್ಯವಿಲ್ಲ ಎಂದು ಹೇಳಿದ್ದಾರೆ. ಸದ್ಯಕ್ಕಂತೂ ಮುಂಬೈಗೆ ಹೋಗಲು ನನಗೆ ಧೈರ್ಯವಿಲ್ಲ ಎಂದು ರಸ್ತೆಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Recommended Video

      India to witness solar eclipse on June 21 | Solar Eclipse | Oneindia Kannada

      ರಾಷ್ಟ್ರದಲ್ಲಿ ಕೊರೊನಾವೈರಸ್‌ಗೆ ಅತಿ ಹೆಚ್ಚು ಹಾನಿಗೊಳಗಾಗಿರುವ ರಾಷ್ಟ್ರ ಮುಂಬೈ ಆಗಿದ್ದು, ಸೋಮವಾರ 2,786 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ. ಆ ಮೂಲಕ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 1,10,744 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಮುಂಬೈ ಕಳೆದ 24 ಗಂಟೆಗಳಲ್ಲಿ 1,067 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಿಸಿದ್ದು, ನಗರದ ಕೋವಿಡ್ -19 ಪಾಸಿಟಿವ್ ರೋಗಿಗಳ ಸಂಖ್ಯೆ 59,293 ಕ್ಕೆ ತಲುಪಿದೆ.

      ''ಈಗಿನ ಪರಿಸ್ಥಿತಿಯಲ್ಲಿ, ನನಗೆ ಮುಂಬೈಗೆ ಬರಲು ಯಾವುದೇ ಧೈರ್ಯವಿಲ್ಲ, ಸಮಯ ಖಂಡಿತವಾಗಿಯೂ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ, ಎಂದು ಎಂಎಸ್‌ಎಂಇ ಮತ್ತು ಮೂಲಸೌಕರ್ಯಗಳನ್ನು ಉದ್ದೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.

      I Dont Have Any Daring To Come Mumbai Right Now: Union Minister Nitin Gadkari

      ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಖಾತೆಗಳನ್ನು ಹೊಂದಿರುವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ನಾಗ್ಪುರದ ಸಂಸತ್ ಸದಸ್ಯರಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+